Home / ಕವನ / ಕವಿತೆ / ಪ್ರೀತಿ ಸತ್ತ ಮನೆಯಲ್ಲಿ

ಪ್ರೀತಿ ಸತ್ತ ಮನೆಯಲ್ಲಿ

ಗಂಡ
ಹಳೆಯ ಪ್ರೇಯಸಿಯ ನೆನಪುಗಳನ್ನು
ಎದೆಗೊತ್ತಿಕೊಂಡು ಸಂತೈಸುತ್ತಿದ್ದಾನೆ.
ಹೆಂಡತಿ-
ಒಂಟಿ ಬಾವಲಿಯ ರೆಕ್ಕೆ ಬಡಿತಗಳನ್ನು
ಎಣಿಸುತ್ತಿದ್ದಾಳೆ.
ಗೋಡೆಗಳು ಪಿಸುಗುಟ್ಟುತ್ತಿವೆ ಗಂಟಲಲ್ಲಿ
ಪ್ರೀತಿ ಸತ್ತಿದೆ ಮನೆಯಲ್ಲಿ.

ಗಂಡ
ಸವೆದ ಕನಸುಗಳನ್ನು ಗುಡ್ಡೆಹಾಕಿ
ಬೆಂಕಿ ಹಚ್ಚುತ್ತಿದ್ದಾನೆ.
ಹೆಂಡತಿ-
ಮೇಣದ ಬತ್ತಿಗಳಾಗಿ ಉರಿದುಹೋಗಿರಿ
ಎಂದು ತಾರೆಯರನ್ನು ಶಪಿಸುತ್ತಿದ್ದಾಳೆ.
ಗೋಡೆಗಳು ಪಿಸುಗುಟ್ಟುತ್ತಿವೆ ಗಂಟಲಲ್ಲಿ
ಪ್ರೀತಿ ಸತ್ತಿದೆ ಮನೆಯಲ್ಲಿ.

ಕೆಂಡ ಹೀರುತ್ತಾ ಗಂಡ
ಬಂಡೆಯಾಗುತ್ತಿದ್ದಾನೆ ಒಳಗೆ
ಚಳಿಗಾಳಿಯ ಸೆರಗಲ್ಲಿ ಸುತ್ತಿಕೊಂಡು
ಹೆಪ್ಪುಗಟ್ಟುತ್ತಿದ್ದಾಳೆ ಹೆಂಡತಿ ಹೊರಗೆ.
ಗೋಡೆಗಳು ಪಿಸುಗುಟ್ಟುತ್ತಿವೆ ಗಂಟಲಲ್ಲಿ
ಪ್ರೀತಿ ಸತ್ತಿದೆ ಮನೆಯಲ್ಲಿ.
‘ಪ್ರೀತಿ’ ಎಲ್ಲಾ ಮೆಟ್ಟಿ ಹುಟ್ಟಿತ್ತು.
ನೀಟಾದ ಕಣ್ಣು, ಮೂಗು, ತುಟಿ
ಶಿಲ್ಪ ಮೈ ಕಟ್ಟು ಹೊತ್ತಿತ್ತು.
ಕದ ತಟ್ಟಬಹುದೆ ಸಾವು?

ಹಣ್ಣಾಯಿತು ಪ್ರೀತಿ.
ಮಣ್ಣಾಯಿತು ಪ್ರೀತಿ.

ಕತ್ತಲು ಕವನಿಸುವ ಹೊತ್ತಿನಲ್ಲಿ
ಗೋಡೆಗಳು ಬಿಕ್ಕುತ್ತಿವೆ ಮೌನದಲ್ಲಿ
ಪ್ರೀತಿ ಸತ್ತ ಮನೆಯಲ್ಲಿ.


Tagged:

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...