Home / ಕವನ / ಕವಿತೆ / ನನಗೆ ಗೊತ್ತಿರಲಿಲ್ಲ….

ನನಗೆ ಗೊತ್ತಿರಲಿಲ್ಲ….

ನಾವು ಪುಟ್ಟ ಹುಡುಗಿಯಾಗಿದ್ದಾಗ
ಆಕಾಶಗೊಳಗೆ ಬೆಂಕಿಯಂತಹ
ನೋವಿದೆಯೆಂದು ಗೊತ್ತಿರಲಿಲ್ಲ.
ಮಳೆ ಸೂರ್ಯನ ಕಣ್ಣೀರು
ಎಂದು ಗೊತ್ತಿರಲಿಲ್ಲ.
ಗಡಗಡ ಎಂದು ಭೂಮಿ
ನಡುಗುವುದು ಅವಮಾನದಿಂದ
ಎಂದು ಗೊತ್ತಿರಲಿಲ್ಲ.

ಗೊತ್ತಿದ್ದರೆ….
ಈಡೇರದ ಆಸೆಗಳ ಮೇಲೆ
ಅಷ್ಟೊಂದು ಕಣ್ಣೀರು
ಹರಿಸುತ್ತಿರಲಿಲ್ಲ.

ಐದು ನಯಾಪೈಸೆಗಾಗಿ
ಆಟದ ಬೊಂಬೆಗಾಗಿ
ಬೆಲ್ಲದ ಮಿಠಾಯಿಗಾಗಿ
ಜರಿ ಲಂಗಕ್ಕಾಗಿ
ಅಷ್ಟೊಂದು ಕಣ್ಣೀರು
ಹರಿಸುತ್ತಿರಲಿಲ್ಲ.

ನನ್ನ ಗೆಳತಿಯರಿಗೆ
ಶ್ರೀಮಂತ ರೆಕ್ಕೆಗಳಿದ್ದವು
ಅವರು ಹಾರುತ್ತಿದ್ದರು
ಹದ್ದುಗಳಂತೆ ಎತ್ತರದಲ್ಲಿ.
ನಾನೋ ನಿಲ್ಲುತ್ತಿದ್ದೆ ಒಂಟಿಯಾಗಿ
ಆಟದ ಕುದುರೆ ಸಹ
ಏರಲಾಗದೆ ಖಾಲಿ ಖಾಲಿ.

ನನ್ನ ಗೆಳತಿಯರು ಅದೆಷ್ಟೊ
ಸಂತೋಷದ ಚಿಟ್ಟೆಗಳನ್ನು
ಸೃಷ್ಟಿಸುತ್ತಿದ್ದರು ನನ್ನೆದುರಲ್ಲಿ.
ನಾನು ಗುಬ್ಬಚ್ಚಿಯಾಗಿ
ಅಣಬೆಯಾಗಿ
ಅಪ್ಪಚ್ಚಿಯಾಗಿ ನೆಲದಲ್ಲಿ
ಹೊರಳುತ್ತಿದ್ದೆ ಹತಾಶೆಯಲ್ಲಿ.

ನನಗೂ ಜೊತೆಗಾರರಿದ್ದರು.
ಮಾತಾಡದ ರೈಲು ಹಳಿಗಳು
ಪುಟಿಯುವ ಹೊಂಡದ
ಮೀನುಗಳು
ಹುರಿದ ಹುಣಿಸೆಬೀಜಗಳು
ಚೌಕ-ಭಾರಗಳು.

ನನಗೆ ಎಷ್ಟೊ ಸಲ
ಅನಿಸುತ್ತಿತ್ತು
ಇಡಿ ಪ್ರಪಂಚವೆ
ನಗುವನ್ನು ನನ್ನ ಮುಖದ
ಮೇಲೆ ಉಗುಳಿದ ಹಾಗೆ
ಆಗೆಲ್ಲ ನಾನು ಮುಖಮುಚ್ಚಿಕೊಂಡು
ಇಳಿಯುತ್ತಿದ್ದೆ ನನ್ನೊಳಗೆ.

ಈಗ ನಾನು ದೊಡ್ಡವಳಾಗಿದ್ದೇನೆ.
ತಾರೆಯರನ್ನು ಕಿತ್ತು
ಮಡಿಲಿಗೆ ಹಾಕಿಕೊಳ್ಳುವಷ್ಟು
ಎತ್ತರ ಬೆಳೆದಿದ್ದೇನೆ.
ಒಂಟಿಯಾಗಿ ಸುತ್ತುತ್ತಿರುವ
ಹದ್ದುಗಳೀಗ ನೋಡುತ್ತಿವೆ.
ನನ್ನನ್ನು
ಸುಮ್ಮನೆ ನೋಡುತ್ತಿವೆ.


Tagged:

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...