Home / ಕವನ / ಕವಿತೆ / ನನಗೆ ಗೊತ್ತಿರಲಿಲ್ಲ….

ನನಗೆ ಗೊತ್ತಿರಲಿಲ್ಲ….

ನಾವು ಪುಟ್ಟ ಹುಡುಗಿಯಾಗಿದ್ದಾಗ
ಆಕಾಶಗೊಳಗೆ ಬೆಂಕಿಯಂತಹ
ನೋವಿದೆಯೆಂದು ಗೊತ್ತಿರಲಿಲ್ಲ.
ಮಳೆ ಸೂರ್ಯನ ಕಣ್ಣೀರು
ಎಂದು ಗೊತ್ತಿರಲಿಲ್ಲ.
ಗಡಗಡ ಎಂದು ಭೂಮಿ
ನಡುಗುವುದು ಅವಮಾನದಿಂದ
ಎಂದು ಗೊತ್ತಿರಲಿಲ್ಲ.

ಗೊತ್ತಿದ್ದರೆ….
ಈಡೇರದ ಆಸೆಗಳ ಮೇಲೆ
ಅಷ್ಟೊಂದು ಕಣ್ಣೀರು
ಹರಿಸುತ್ತಿರಲಿಲ್ಲ.

ಐದು ನಯಾಪೈಸೆಗಾಗಿ
ಆಟದ ಬೊಂಬೆಗಾಗಿ
ಬೆಲ್ಲದ ಮಿಠಾಯಿಗಾಗಿ
ಜರಿ ಲಂಗಕ್ಕಾಗಿ
ಅಷ್ಟೊಂದು ಕಣ್ಣೀರು
ಹರಿಸುತ್ತಿರಲಿಲ್ಲ.

ನನ್ನ ಗೆಳತಿಯರಿಗೆ
ಶ್ರೀಮಂತ ರೆಕ್ಕೆಗಳಿದ್ದವು
ಅವರು ಹಾರುತ್ತಿದ್ದರು
ಹದ್ದುಗಳಂತೆ ಎತ್ತರದಲ್ಲಿ.
ನಾನೋ ನಿಲ್ಲುತ್ತಿದ್ದೆ ಒಂಟಿಯಾಗಿ
ಆಟದ ಕುದುರೆ ಸಹ
ಏರಲಾಗದೆ ಖಾಲಿ ಖಾಲಿ.

ನನ್ನ ಗೆಳತಿಯರು ಅದೆಷ್ಟೊ
ಸಂತೋಷದ ಚಿಟ್ಟೆಗಳನ್ನು
ಸೃಷ್ಟಿಸುತ್ತಿದ್ದರು ನನ್ನೆದುರಲ್ಲಿ.
ನಾನು ಗುಬ್ಬಚ್ಚಿಯಾಗಿ
ಅಣಬೆಯಾಗಿ
ಅಪ್ಪಚ್ಚಿಯಾಗಿ ನೆಲದಲ್ಲಿ
ಹೊರಳುತ್ತಿದ್ದೆ ಹತಾಶೆಯಲ್ಲಿ.

ನನಗೂ ಜೊತೆಗಾರರಿದ್ದರು.
ಮಾತಾಡದ ರೈಲು ಹಳಿಗಳು
ಪುಟಿಯುವ ಹೊಂಡದ
ಮೀನುಗಳು
ಹುರಿದ ಹುಣಿಸೆಬೀಜಗಳು
ಚೌಕ-ಭಾರಗಳು.

ನನಗೆ ಎಷ್ಟೊ ಸಲ
ಅನಿಸುತ್ತಿತ್ತು
ಇಡಿ ಪ್ರಪಂಚವೆ
ನಗುವನ್ನು ನನ್ನ ಮುಖದ
ಮೇಲೆ ಉಗುಳಿದ ಹಾಗೆ
ಆಗೆಲ್ಲ ನಾನು ಮುಖಮುಚ್ಚಿಕೊಂಡು
ಇಳಿಯುತ್ತಿದ್ದೆ ನನ್ನೊಳಗೆ.

ಈಗ ನಾನು ದೊಡ್ಡವಳಾಗಿದ್ದೇನೆ.
ತಾರೆಯರನ್ನು ಕಿತ್ತು
ಮಡಿಲಿಗೆ ಹಾಕಿಕೊಳ್ಳುವಷ್ಟು
ಎತ್ತರ ಬೆಳೆದಿದ್ದೇನೆ.
ಒಂಟಿಯಾಗಿ ಸುತ್ತುತ್ತಿರುವ
ಹದ್ದುಗಳೀಗ ನೋಡುತ್ತಿವೆ.
ನನ್ನನ್ನು
ಸುಮ್ಮನೆ ನೋಡುತ್ತಿವೆ.


Tagged:

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...