Home / ಕವನ / ಕವಿತೆ / ನನಗೆ ಗೊತ್ತಿರಲಿಲ್ಲ….

ನನಗೆ ಗೊತ್ತಿರಲಿಲ್ಲ….

ನಾವು ಪುಟ್ಟ ಹುಡುಗಿಯಾಗಿದ್ದಾಗ
ಆಕಾಶಗೊಳಗೆ ಬೆಂಕಿಯಂತಹ
ನೋವಿದೆಯೆಂದು ಗೊತ್ತಿರಲಿಲ್ಲ.
ಮಳೆ ಸೂರ್ಯನ ಕಣ್ಣೀರು
ಎಂದು ಗೊತ್ತಿರಲಿಲ್ಲ.
ಗಡಗಡ ಎಂದು ಭೂಮಿ
ನಡುಗುವುದು ಅವಮಾನದಿಂದ
ಎಂದು ಗೊತ್ತಿರಲಿಲ್ಲ.

ಗೊತ್ತಿದ್ದರೆ….
ಈಡೇರದ ಆಸೆಗಳ ಮೇಲೆ
ಅಷ್ಟೊಂದು ಕಣ್ಣೀರು
ಹರಿಸುತ್ತಿರಲಿಲ್ಲ.

ಐದು ನಯಾಪೈಸೆಗಾಗಿ
ಆಟದ ಬೊಂಬೆಗಾಗಿ
ಬೆಲ್ಲದ ಮಿಠಾಯಿಗಾಗಿ
ಜರಿ ಲಂಗಕ್ಕಾಗಿ
ಅಷ್ಟೊಂದು ಕಣ್ಣೀರು
ಹರಿಸುತ್ತಿರಲಿಲ್ಲ.

ನನ್ನ ಗೆಳತಿಯರಿಗೆ
ಶ್ರೀಮಂತ ರೆಕ್ಕೆಗಳಿದ್ದವು
ಅವರು ಹಾರುತ್ತಿದ್ದರು
ಹದ್ದುಗಳಂತೆ ಎತ್ತರದಲ್ಲಿ.
ನಾನೋ ನಿಲ್ಲುತ್ತಿದ್ದೆ ಒಂಟಿಯಾಗಿ
ಆಟದ ಕುದುರೆ ಸಹ
ಏರಲಾಗದೆ ಖಾಲಿ ಖಾಲಿ.

ನನ್ನ ಗೆಳತಿಯರು ಅದೆಷ್ಟೊ
ಸಂತೋಷದ ಚಿಟ್ಟೆಗಳನ್ನು
ಸೃಷ್ಟಿಸುತ್ತಿದ್ದರು ನನ್ನೆದುರಲ್ಲಿ.
ನಾನು ಗುಬ್ಬಚ್ಚಿಯಾಗಿ
ಅಣಬೆಯಾಗಿ
ಅಪ್ಪಚ್ಚಿಯಾಗಿ ನೆಲದಲ್ಲಿ
ಹೊರಳುತ್ತಿದ್ದೆ ಹತಾಶೆಯಲ್ಲಿ.

ನನಗೂ ಜೊತೆಗಾರರಿದ್ದರು.
ಮಾತಾಡದ ರೈಲು ಹಳಿಗಳು
ಪುಟಿಯುವ ಹೊಂಡದ
ಮೀನುಗಳು
ಹುರಿದ ಹುಣಿಸೆಬೀಜಗಳು
ಚೌಕ-ಭಾರಗಳು.

ನನಗೆ ಎಷ್ಟೊ ಸಲ
ಅನಿಸುತ್ತಿತ್ತು
ಇಡಿ ಪ್ರಪಂಚವೆ
ನಗುವನ್ನು ನನ್ನ ಮುಖದ
ಮೇಲೆ ಉಗುಳಿದ ಹಾಗೆ
ಆಗೆಲ್ಲ ನಾನು ಮುಖಮುಚ್ಚಿಕೊಂಡು
ಇಳಿಯುತ್ತಿದ್ದೆ ನನ್ನೊಳಗೆ.

ಈಗ ನಾನು ದೊಡ್ಡವಳಾಗಿದ್ದೇನೆ.
ತಾರೆಯರನ್ನು ಕಿತ್ತು
ಮಡಿಲಿಗೆ ಹಾಕಿಕೊಳ್ಳುವಷ್ಟು
ಎತ್ತರ ಬೆಳೆದಿದ್ದೇನೆ.
ಒಂಟಿಯಾಗಿ ಸುತ್ತುತ್ತಿರುವ
ಹದ್ದುಗಳೀಗ ನೋಡುತ್ತಿವೆ.
ನನ್ನನ್ನು
ಸುಮ್ಮನೆ ನೋಡುತ್ತಿವೆ.


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...