Home / ಕವನ / ಕವಿತೆ / ನಾನು ಸೂರ್ಯ

ನಾನು ಸೂರ್ಯ

ಎಲ್ಲ ಹೇಳುತ್ತಾರೆ ನಾನು
ಹಕ್ಕಿಗಳ ಗಡಿಯಾರ
ನನಗೊ….
ಚಿಲಿಪಿಲಿ ಸದ್ದು
ಕುಲುಕಿ ಎಬ್ಬಿಸಿದಾಗಲೆ
ಎಚ್ಚರ!

ನಾನು ಬಂಗಾರದ ರಥದ
ಒಡೆಯ ಎನ್ನುವುದು
ಕೇವಲ ಉಳ್ಳವರ ಕುಹಕ
ನಾನು ನಿಮ್ಮಂತೆಯೆ
ಬೆಂಕಿಯ ಕಾರ್ಖಾನೆಯಲ್ಲಿ
ಬಡ ಕಾರ್ಮಿಕ

ನಾನು ಅಸ್ಪೃಶ್ಯ
ನನ್ನ ಜೊತೆಗೆ ಎದ್ದು
ಧೂಳು ಗುಡಿಸುವ
ಜಾಡಮಾಲಿಯನ್ನು
ಬೆಚ್ಚಗೆ ಚುಂಬಿಸುತ್ತೇನೆ
ನಂತರ ಮಿಕ್ಕವರನ್ನು
ಸುಡುತ್ತಾ ಹೋಗುತ್ತೇನೆ.

ನಾನು ಹುಟ್ಟು ಬಂಡಾಯಗಾರ
ಜಗತ್ತಿನ ಅನ್ಯಾಯದ
ವಿರುದ್ಧ ಯಾವತ್ತು
ಸಿಡಿದು ನಿಂತಿದ್ದೇನೆ ದೂರ
ನಾನು ಕವಿ
ಹಳ್ಳಗಳು ನನ್ನ
ಹನಿಗವನಗಳು
ನದಿಗಳು ನನ್ನ
ದೀರ್ಘ ಕವನಗಳು
ಸಾಗರಗಳು ನನ್ನ
ಮಹಾಕಾವ್ಯಗಳು.

ನಾನು ಕಲಾವಿದ
ನನ್ನ ಸಂಜೆ
ಇಡಿ ಜಗತ್ತಿನಲ್ಲೆ
ಮಾನ್ಯತೆ ಪಡೆದ
ಉತ್ಕೃಷ್ಟ ಕಲಾಕೃತಿ

ನಾನು ಕಾವಿ ಉಡುತ್ತೇನೆ
ಸಂನ್ಯಾಸಿಯಲ್ಲ
ನಾನು ಬೆಳಕು ಕೊಡುತ್ತೇನೆ
ಜ್ಞಾನಿಯಲ್ಲ
ನಾನು ಸೂರ್ಯ-
ನಾನು ವಸ್ತು
ನಾನು ಚೈತನ್ಯ.

*****

Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...