Home / ಕವನ / ಕವಿತೆ / ನಾನು ಸೂರ್ಯ

ನಾನು ಸೂರ್ಯ

ಎಲ್ಲ ಹೇಳುತ್ತಾರೆ ನಾನು
ಹಕ್ಕಿಗಳ ಗಡಿಯಾರ
ನನಗೊ….
ಚಿಲಿಪಿಲಿ ಸದ್ದು
ಕುಲುಕಿ ಎಬ್ಬಿಸಿದಾಗಲೆ
ಎಚ್ಚರ!

ನಾನು ಬಂಗಾರದ ರಥದ
ಒಡೆಯ ಎನ್ನುವುದು
ಕೇವಲ ಉಳ್ಳವರ ಕುಹಕ
ನಾನು ನಿಮ್ಮಂತೆಯೆ
ಬೆಂಕಿಯ ಕಾರ್ಖಾನೆಯಲ್ಲಿ
ಬಡ ಕಾರ್ಮಿಕ

ನಾನು ಅಸ್ಪೃಶ್ಯ
ನನ್ನ ಜೊತೆಗೆ ಎದ್ದು
ಧೂಳು ಗುಡಿಸುವ
ಜಾಡಮಾಲಿಯನ್ನು
ಬೆಚ್ಚಗೆ ಚುಂಬಿಸುತ್ತೇನೆ
ನಂತರ ಮಿಕ್ಕವರನ್ನು
ಸುಡುತ್ತಾ ಹೋಗುತ್ತೇನೆ.

ನಾನು ಹುಟ್ಟು ಬಂಡಾಯಗಾರ
ಜಗತ್ತಿನ ಅನ್ಯಾಯದ
ವಿರುದ್ಧ ಯಾವತ್ತು
ಸಿಡಿದು ನಿಂತಿದ್ದೇನೆ ದೂರ
ನಾನು ಕವಿ
ಹಳ್ಳಗಳು ನನ್ನ
ಹನಿಗವನಗಳು
ನದಿಗಳು ನನ್ನ
ದೀರ್ಘ ಕವನಗಳು
ಸಾಗರಗಳು ನನ್ನ
ಮಹಾಕಾವ್ಯಗಳು.

ನಾನು ಕಲಾವಿದ
ನನ್ನ ಸಂಜೆ
ಇಡಿ ಜಗತ್ತಿನಲ್ಲೆ
ಮಾನ್ಯತೆ ಪಡೆದ
ಉತ್ಕೃಷ್ಟ ಕಲಾಕೃತಿ

ನಾನು ಕಾವಿ ಉಡುತ್ತೇನೆ
ಸಂನ್ಯಾಸಿಯಲ್ಲ
ನಾನು ಬೆಳಕು ಕೊಡುತ್ತೇನೆ
ಜ್ಞಾನಿಯಲ್ಲ
ನಾನು ಸೂರ್ಯ-
ನಾನು ವಸ್ತು
ನಾನು ಚೈತನ್ಯ.

*****

Tagged:

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...