Home / ಕವನ / ಕವಿತೆ / ನಾನು ಸೂರ್ಯ

ನಾನು ಸೂರ್ಯ

ಎಲ್ಲ ಹೇಳುತ್ತಾರೆ ನಾನು
ಹಕ್ಕಿಗಳ ಗಡಿಯಾರ
ನನಗೊ….
ಚಿಲಿಪಿಲಿ ಸದ್ದು
ಕುಲುಕಿ ಎಬ್ಬಿಸಿದಾಗಲೆ
ಎಚ್ಚರ!

ನಾನು ಬಂಗಾರದ ರಥದ
ಒಡೆಯ ಎನ್ನುವುದು
ಕೇವಲ ಉಳ್ಳವರ ಕುಹಕ
ನಾನು ನಿಮ್ಮಂತೆಯೆ
ಬೆಂಕಿಯ ಕಾರ್ಖಾನೆಯಲ್ಲಿ
ಬಡ ಕಾರ್ಮಿಕ

ನಾನು ಅಸ್ಪೃಶ್ಯ
ನನ್ನ ಜೊತೆಗೆ ಎದ್ದು
ಧೂಳು ಗುಡಿಸುವ
ಜಾಡಮಾಲಿಯನ್ನು
ಬೆಚ್ಚಗೆ ಚುಂಬಿಸುತ್ತೇನೆ
ನಂತರ ಮಿಕ್ಕವರನ್ನು
ಸುಡುತ್ತಾ ಹೋಗುತ್ತೇನೆ.

ನಾನು ಹುಟ್ಟು ಬಂಡಾಯಗಾರ
ಜಗತ್ತಿನ ಅನ್ಯಾಯದ
ವಿರುದ್ಧ ಯಾವತ್ತು
ಸಿಡಿದು ನಿಂತಿದ್ದೇನೆ ದೂರ
ನಾನು ಕವಿ
ಹಳ್ಳಗಳು ನನ್ನ
ಹನಿಗವನಗಳು
ನದಿಗಳು ನನ್ನ
ದೀರ್ಘ ಕವನಗಳು
ಸಾಗರಗಳು ನನ್ನ
ಮಹಾಕಾವ್ಯಗಳು.

ನಾನು ಕಲಾವಿದ
ನನ್ನ ಸಂಜೆ
ಇಡಿ ಜಗತ್ತಿನಲ್ಲೆ
ಮಾನ್ಯತೆ ಪಡೆದ
ಉತ್ಕೃಷ್ಟ ಕಲಾಕೃತಿ

ನಾನು ಕಾವಿ ಉಡುತ್ತೇನೆ
ಸಂನ್ಯಾಸಿಯಲ್ಲ
ನಾನು ಬೆಳಕು ಕೊಡುತ್ತೇನೆ
ಜ್ಞಾನಿಯಲ್ಲ
ನಾನು ಸೂರ್ಯ-
ನಾನು ವಸ್ತು
ನಾನು ಚೈತನ್ಯ.

*****

Tagged:

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...