ಯಾಕೆ?

ಈಗೀಗ ಒಂದೇ ಯೋಚನೆ
ನನ್ನೊಳಗೆ.
ಬದಲಾದ ಸಂತೋಷಗಳಲ್ಲಿ
ಬದಲಾದ ನೋವುಗಳಲ್ಲಿ
ನಾನು ಬದಲಾಗಿದ್ದೇನೆಯೆ?

ನನ್ನ ಪ್ರೀತಿಯ ಬಗ್ಗೆಯೆ
ಗಾಢ ಅನುಮಾನ
ನಿನ್ನ ಕಣ್ಣೊಳಗಿನ ದುಃಖ
ಗೆಲ್ಲಲಾಗಿಲ್ಲ ಯಾಕೆ?

ಬಣ್ಣದ ಹಾಗೆ
ಬೆಳಕಿನ ಹಾಗೆ
ನುಣುಚಿ ಹೋಗುತ್ತಿದ್ದೀಯೆ
ಯಾಕೆ? ಯಾಕೆ?

ನೀನು ಕೇವಲ
ಹಸಿ-ಬಿಸಿ ರಕ್ತಮಾಂಸದ
ಮುದ್ದೆಯಾಗಿದ್ದಿದ್ದರೆ
ಎಂದೋ ಹೋಗುತ್ತಿದ್ದೆ
ಹಿಂದಿರುಗಿ ನೋಡದೆ

ಆದರೆ ನೀನು
ಪರಿಮಳಿಸುವ ಗಾಳಿಯಾಗಿ
ಇರುವೆ, ಮೊರೆಯುತ್ತಿರುವೆ
ನನ್ನೊಳಗೆ.

ಕೊನೆಗೆ-
ನೀನು ಪ್ರೀತಿಯ ದಂಡೆಯಾಗಿದ್ದರೆ
ನಾನು ನಡೆದು ಬರುತ್ತಿದ್ದೆ
ಆದರದು ಮಹಾಪೂರ
ಕಾಲಡಿಯ ಮಣ್ಣು ಕುಸಿಯುತ್ತಿದೆ
ಕೊಚ್ಚಿ ಹೋಗುತ್ತಿದ್ದೇನೆ.

*****

Previous post ಸತ್ಯ
Next post ಬದಲಾಗಿದೆ ಕಾಲ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…