Home / ಕವನ / ಕವಿತೆ / ಪ್ರೇಮ ಮತ್ತು ದುಃಖ

ಪ್ರೇಮ ಮತ್ತು ದುಃಖ

ಬಣ್ಣದ ಸಂಜೆಯನ್ನು
ನೋಡುತ್ತಾ ನಿಂತಿದ್ದೆ-
ನೋಡುತ್ತಿರುವಂತೆಯೆ
ಸಿಡಿಲ ಚೂರೊಂದು
ಉರಿದು ಕಪ್ಪಾಯಿತು.

ಮೊರೆಯುವ ಕಡಲನ್ನು
ನೋಡುತ್ತಾ ನಿಂತಿದ್ದೆ-
ನೋಡುತ್ತಿರುವಂತೆಯೆ
ತತ್ತರಿಸುವ ಅಲೆಯೊಂದು
ಎತ್ತರಕೆ ನೆಗೆದು ಕೆಳಗೆ ಬಿತ್ತು.

ಹೆಮ್ಮರವೊಂದನ್ನು
ನೋಡುತ್ತಾ ನಿಂತಿದ್ದೆ-
ನೋಡುತ್ತಿರುವಂತೆಯೆ
ಒಂದರ ಹಿಂದೊಂದು
ಎಲೆ ಉದುರಿ ಬೋಳಾಯಿತು.

ಹಸಿ ಮಣ್ಣಿನ ಮೇಲೆ
ನಡೆದು ಹೋಗುತ್ತಿದ್ದೆ-
ಹೋಗುತ್ತಿರುವಂತೆಯೆ
ಮುಳ್ಳೊಂದು
ಚುಚ್ಚಿ
ತಡೆದು ನಿಲ್ಲಿಸಿತು.

ಇಡಿಯಾಗಿ ಸೂರ್ಯನಿಗೆ
ಮೈಯೊಡ್ಡಿ ನಿಂತಿದ್ದೆ-
ನೋಡುತ್ತಿರುವಂತೆಯೆ
ಮೂಗಿನ ಮೇಲೊಂದು
ಹನಿ ಉರುಳಿ ಒದ್ದೆಯಾಯಿತು.

ಬಣ್ಣದ ಸಂಜೆ
ಉಕ್ಕುವ ಕಡಲು
ಉರಿಯುವ ಸೂರ್ಯ
ಮಣ್ಣು, ಮರ ಎಲ್ಲಾ
ಕಣ್ಣೊಳಗೆ ಹೂತು
ಯೌವನ ಮಾತಾಡಿತು
ಪ್ರೇಮವೆಂದು ಕರೆಯಿತು.

ಆಕಾಶವ ಸೀಳಿದ ಸಿಡಿಲು
ನೆಲಕಚ್ಚಿದ ಅಲೆ, ಎಲೆ
ಚುಚ್ಚಿ ನಿಲ್ಲಿಸಿದ ಮುಳ್ಳು
ಸಿಳ್ಳು ಹೊಡೆದು ಹಣೆಯ ಮೇಲೆ
ಬೆವರ ಪೋಣಿಸಿತು.

ಸೂರ್ಯ, ಕಡಲು, ಸಂಜೆ,
ಮರ, ಮಣ್ಣು ಎಲ್ಲಾ
ಕಣ್ಣೊಳಗೇ ಹಣ್ಣಾಯಿತು
ಮುಪ್ಪು ಅದನ್ನು
ದುಃಖವೆಂದು ಬರೆಯಿತು.


Tagged:

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...