Home / ಕವನ / ಕವಿತೆ / ಪ್ರೇಮ ಮತ್ತು ದುಃಖ

ಪ್ರೇಮ ಮತ್ತು ದುಃಖ

ಬಣ್ಣದ ಸಂಜೆಯನ್ನು
ನೋಡುತ್ತಾ ನಿಂತಿದ್ದೆ-
ನೋಡುತ್ತಿರುವಂತೆಯೆ
ಸಿಡಿಲ ಚೂರೊಂದು
ಉರಿದು ಕಪ್ಪಾಯಿತು.

ಮೊರೆಯುವ ಕಡಲನ್ನು
ನೋಡುತ್ತಾ ನಿಂತಿದ್ದೆ-
ನೋಡುತ್ತಿರುವಂತೆಯೆ
ತತ್ತರಿಸುವ ಅಲೆಯೊಂದು
ಎತ್ತರಕೆ ನೆಗೆದು ಕೆಳಗೆ ಬಿತ್ತು.

ಹೆಮ್ಮರವೊಂದನ್ನು
ನೋಡುತ್ತಾ ನಿಂತಿದ್ದೆ-
ನೋಡುತ್ತಿರುವಂತೆಯೆ
ಒಂದರ ಹಿಂದೊಂದು
ಎಲೆ ಉದುರಿ ಬೋಳಾಯಿತು.

ಹಸಿ ಮಣ್ಣಿನ ಮೇಲೆ
ನಡೆದು ಹೋಗುತ್ತಿದ್ದೆ-
ಹೋಗುತ್ತಿರುವಂತೆಯೆ
ಮುಳ್ಳೊಂದು
ಚುಚ್ಚಿ
ತಡೆದು ನಿಲ್ಲಿಸಿತು.

ಇಡಿಯಾಗಿ ಸೂರ್ಯನಿಗೆ
ಮೈಯೊಡ್ಡಿ ನಿಂತಿದ್ದೆ-
ನೋಡುತ್ತಿರುವಂತೆಯೆ
ಮೂಗಿನ ಮೇಲೊಂದು
ಹನಿ ಉರುಳಿ ಒದ್ದೆಯಾಯಿತು.

ಬಣ್ಣದ ಸಂಜೆ
ಉಕ್ಕುವ ಕಡಲು
ಉರಿಯುವ ಸೂರ್ಯ
ಮಣ್ಣು, ಮರ ಎಲ್ಲಾ
ಕಣ್ಣೊಳಗೆ ಹೂತು
ಯೌವನ ಮಾತಾಡಿತು
ಪ್ರೇಮವೆಂದು ಕರೆಯಿತು.

ಆಕಾಶವ ಸೀಳಿದ ಸಿಡಿಲು
ನೆಲಕಚ್ಚಿದ ಅಲೆ, ಎಲೆ
ಚುಚ್ಚಿ ನಿಲ್ಲಿಸಿದ ಮುಳ್ಳು
ಸಿಳ್ಳು ಹೊಡೆದು ಹಣೆಯ ಮೇಲೆ
ಬೆವರ ಪೋಣಿಸಿತು.

ಸೂರ್ಯ, ಕಡಲು, ಸಂಜೆ,
ಮರ, ಮಣ್ಣು ಎಲ್ಲಾ
ಕಣ್ಣೊಳಗೇ ಹಣ್ಣಾಯಿತು
ಮುಪ್ಪು ಅದನ್ನು
ದುಃಖವೆಂದು ಬರೆಯಿತು.


Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...