ಕವಿಗೋಷ್ಠಿಯಲ್ಲಿ….

ಢಣಢಣ ಗಂಟೆ ಬಾರಿಸಿತು
ಎಲ್ಲರೂ ಸಾಲಾಗಿ ಕುಳಿತರು
ಬಣ್ಣ ಬಣ್ಣದ ಕವಿತೆಗಳು
ಒಂದೊಂದಾಗಿ ವೇದಿಕೆಗೆ ಬಂದವು.

ಕೆಲವು ಕವಿತೆಗಳು
ಹೂಗಳಂತೆ ಅರಳಿದರೆ
ಮತ್ತೆ ಕೆಲವು
ನದಿಗಳಂತೆ ಹರಿದವು.

ಕೆಲವು ಕವಿತೆಗಳು
ನಕ್ಷತ್ರಗಳಂತೆ ಮಿನುಗಿದರೆ
ಮತ್ತೆ ಕೆಲವು
ಉಲ್ಕೆಗಳಂತೆ ಉರಿದು
ಬೂದಿಯಾದವು.

ಕೆಲವು ಕವಿತೆಗಳು
ಕಲ್ಲುಸಕ್ಕರೆ ತಿನ್ನಿಸಿದರೆ
ಮತ್ತೆ ಕೆಲವು
ಕಷಾಯ ಕುಡಿಸಿದವು.

ಕೆಲವು ಕವಿತೆಗಳು
ಬೆಂಕಿ ಉಗುಳಿದರೆ
ಮತ್ತೆ ಕೆಲವು
ರಕ್ತ ಕಾರಿದವು.
ಕೆಲವು ಕವಿತೆಗಳು
ಬಿಕ್ಕಳಿಸಿ ಅತ್ತರೆ
ಮತ್ತೆ ಕೆಲವು
ಮುಕ್ಕಳಿಸಿ ನಕ್ಕವು

ಕೆಲವು ಕವಿತೆಗಳು
ತೊಂಡು ದನಗಳಂತೆ
ಕಂಡದ್ದನ್ನೆಲ್ಲ ಹೊಸಕಿಹಾಕಿದರೆ
ಮತ್ತೆ ಕೆಲವು ತಾಯಿಯಂತೆ
ಅವನ್ನೆತ್ತಿಕೊಂಡು ಸಂತೈಸಿದವು.

ಕೊನೆಗೆ ಬಂದದ್ದು
ಪ್ರೇಮಿಯಂತಹ ಕವಿತೆ
ನೆಲ ನೀರು ಆಕಾಶದಂತ ಕವಿತೆ
ಅದು ಕಡಲಿನ ಹಾಗೆ ಮೊರೆಯುತ್ತಿತ್ತು
ನೆಲದ ಹಾಗೆ ಪರಿಮಳಿಸುತ್ತಿತ್ತು.
ಅದು ಆಕಾಶದಂತೆ
ಎಲ್ಲವನ್ನೂ ತಬ್ಬಿಕೊಂಡು
ಮೈ ಮರೆಯಿತು, ಮೈ ಮರೆಸಿತು.

(ಕವಿಗೋಷ್ಠಿಯೊಂದರಲ್ಲಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಯನ್ನು ಕೇಳಿ)


Previous post ವಿನಯ
Next post ಜೀರುಂಡೆ ಸಾಲು

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys