Home / ಕವನ / ಕವಿತೆ / ಕವಿಗೋಷ್ಠಿಯಲ್ಲಿ….

ಕವಿಗೋಷ್ಠಿಯಲ್ಲಿ….

ಢಣಢಣ ಗಂಟೆ ಬಾರಿಸಿತು
ಎಲ್ಲರೂ ಸಾಲಾಗಿ ಕುಳಿತರು
ಬಣ್ಣ ಬಣ್ಣದ ಕವಿತೆಗಳು
ಒಂದೊಂದಾಗಿ ವೇದಿಕೆಗೆ ಬಂದವು.

ಕೆಲವು ಕವಿತೆಗಳು
ಹೂಗಳಂತೆ ಅರಳಿದರೆ
ಮತ್ತೆ ಕೆಲವು
ನದಿಗಳಂತೆ ಹರಿದವು.

ಕೆಲವು ಕವಿತೆಗಳು
ನಕ್ಷತ್ರಗಳಂತೆ ಮಿನುಗಿದರೆ
ಮತ್ತೆ ಕೆಲವು
ಉಲ್ಕೆಗಳಂತೆ ಉರಿದು
ಬೂದಿಯಾದವು.

ಕೆಲವು ಕವಿತೆಗಳು
ಕಲ್ಲುಸಕ್ಕರೆ ತಿನ್ನಿಸಿದರೆ
ಮತ್ತೆ ಕೆಲವು
ಕಷಾಯ ಕುಡಿಸಿದವು.

ಕೆಲವು ಕವಿತೆಗಳು
ಬೆಂಕಿ ಉಗುಳಿದರೆ
ಮತ್ತೆ ಕೆಲವು
ರಕ್ತ ಕಾರಿದವು.
ಕೆಲವು ಕವಿತೆಗಳು
ಬಿಕ್ಕಳಿಸಿ ಅತ್ತರೆ
ಮತ್ತೆ ಕೆಲವು
ಮುಕ್ಕಳಿಸಿ ನಕ್ಕವು

ಕೆಲವು ಕವಿತೆಗಳು
ತೊಂಡು ದನಗಳಂತೆ
ಕಂಡದ್ದನ್ನೆಲ್ಲ ಹೊಸಕಿಹಾಕಿದರೆ
ಮತ್ತೆ ಕೆಲವು ತಾಯಿಯಂತೆ
ಅವನ್ನೆತ್ತಿಕೊಂಡು ಸಂತೈಸಿದವು.

ಕೊನೆಗೆ ಬಂದದ್ದು
ಪ್ರೇಮಿಯಂತಹ ಕವಿತೆ
ನೆಲ ನೀರು ಆಕಾಶದಂತ ಕವಿತೆ
ಅದು ಕಡಲಿನ ಹಾಗೆ ಮೊರೆಯುತ್ತಿತ್ತು
ನೆಲದ ಹಾಗೆ ಪರಿಮಳಿಸುತ್ತಿತ್ತು.
ಅದು ಆಕಾಶದಂತೆ
ಎಲ್ಲವನ್ನೂ ತಬ್ಬಿಕೊಂಡು
ಮೈ ಮರೆಯಿತು, ಮೈ ಮರೆಸಿತು.

(ಕವಿಗೋಷ್ಠಿಯೊಂದರಲ್ಲಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಯನ್ನು ಕೇಳಿ)


Tagged:

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...