Home / ಕವನ / ಕವಿತೆ / ಕವಿಗೋಷ್ಠಿಯಲ್ಲಿ….

ಕವಿಗೋಷ್ಠಿಯಲ್ಲಿ….

ಢಣಢಣ ಗಂಟೆ ಬಾರಿಸಿತು
ಎಲ್ಲರೂ ಸಾಲಾಗಿ ಕುಳಿತರು
ಬಣ್ಣ ಬಣ್ಣದ ಕವಿತೆಗಳು
ಒಂದೊಂದಾಗಿ ವೇದಿಕೆಗೆ ಬಂದವು.

ಕೆಲವು ಕವಿತೆಗಳು
ಹೂಗಳಂತೆ ಅರಳಿದರೆ
ಮತ್ತೆ ಕೆಲವು
ನದಿಗಳಂತೆ ಹರಿದವು.

ಕೆಲವು ಕವಿತೆಗಳು
ನಕ್ಷತ್ರಗಳಂತೆ ಮಿನುಗಿದರೆ
ಮತ್ತೆ ಕೆಲವು
ಉಲ್ಕೆಗಳಂತೆ ಉರಿದು
ಬೂದಿಯಾದವು.

ಕೆಲವು ಕವಿತೆಗಳು
ಕಲ್ಲುಸಕ್ಕರೆ ತಿನ್ನಿಸಿದರೆ
ಮತ್ತೆ ಕೆಲವು
ಕಷಾಯ ಕುಡಿಸಿದವು.

ಕೆಲವು ಕವಿತೆಗಳು
ಬೆಂಕಿ ಉಗುಳಿದರೆ
ಮತ್ತೆ ಕೆಲವು
ರಕ್ತ ಕಾರಿದವು.
ಕೆಲವು ಕವಿತೆಗಳು
ಬಿಕ್ಕಳಿಸಿ ಅತ್ತರೆ
ಮತ್ತೆ ಕೆಲವು
ಮುಕ್ಕಳಿಸಿ ನಕ್ಕವು

ಕೆಲವು ಕವಿತೆಗಳು
ತೊಂಡು ದನಗಳಂತೆ
ಕಂಡದ್ದನ್ನೆಲ್ಲ ಹೊಸಕಿಹಾಕಿದರೆ
ಮತ್ತೆ ಕೆಲವು ತಾಯಿಯಂತೆ
ಅವನ್ನೆತ್ತಿಕೊಂಡು ಸಂತೈಸಿದವು.

ಕೊನೆಗೆ ಬಂದದ್ದು
ಪ್ರೇಮಿಯಂತಹ ಕವಿತೆ
ನೆಲ ನೀರು ಆಕಾಶದಂತ ಕವಿತೆ
ಅದು ಕಡಲಿನ ಹಾಗೆ ಮೊರೆಯುತ್ತಿತ್ತು
ನೆಲದ ಹಾಗೆ ಪರಿಮಳಿಸುತ್ತಿತ್ತು.
ಅದು ಆಕಾಶದಂತೆ
ಎಲ್ಲವನ್ನೂ ತಬ್ಬಿಕೊಂಡು
ಮೈ ಮರೆಯಿತು, ಮೈ ಮರೆಸಿತು.

(ಕವಿಗೋಷ್ಠಿಯೊಂದರಲ್ಲಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಯನ್ನು ಕೇಳಿ)


Tagged:

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...