Home / ಕವನ / ಕವಿತೆ / ಕವಿಗೋಷ್ಠಿಯಲ್ಲಿ….

ಕವಿಗೋಷ್ಠಿಯಲ್ಲಿ….

ಢಣಢಣ ಗಂಟೆ ಬಾರಿಸಿತು
ಎಲ್ಲರೂ ಸಾಲಾಗಿ ಕುಳಿತರು
ಬಣ್ಣ ಬಣ್ಣದ ಕವಿತೆಗಳು
ಒಂದೊಂದಾಗಿ ವೇದಿಕೆಗೆ ಬಂದವು.

ಕೆಲವು ಕವಿತೆಗಳು
ಹೂಗಳಂತೆ ಅರಳಿದರೆ
ಮತ್ತೆ ಕೆಲವು
ನದಿಗಳಂತೆ ಹರಿದವು.

ಕೆಲವು ಕವಿತೆಗಳು
ನಕ್ಷತ್ರಗಳಂತೆ ಮಿನುಗಿದರೆ
ಮತ್ತೆ ಕೆಲವು
ಉಲ್ಕೆಗಳಂತೆ ಉರಿದು
ಬೂದಿಯಾದವು.

ಕೆಲವು ಕವಿತೆಗಳು
ಕಲ್ಲುಸಕ್ಕರೆ ತಿನ್ನಿಸಿದರೆ
ಮತ್ತೆ ಕೆಲವು
ಕಷಾಯ ಕುಡಿಸಿದವು.

ಕೆಲವು ಕವಿತೆಗಳು
ಬೆಂಕಿ ಉಗುಳಿದರೆ
ಮತ್ತೆ ಕೆಲವು
ರಕ್ತ ಕಾರಿದವು.
ಕೆಲವು ಕವಿತೆಗಳು
ಬಿಕ್ಕಳಿಸಿ ಅತ್ತರೆ
ಮತ್ತೆ ಕೆಲವು
ಮುಕ್ಕಳಿಸಿ ನಕ್ಕವು

ಕೆಲವು ಕವಿತೆಗಳು
ತೊಂಡು ದನಗಳಂತೆ
ಕಂಡದ್ದನ್ನೆಲ್ಲ ಹೊಸಕಿಹಾಕಿದರೆ
ಮತ್ತೆ ಕೆಲವು ತಾಯಿಯಂತೆ
ಅವನ್ನೆತ್ತಿಕೊಂಡು ಸಂತೈಸಿದವು.

ಕೊನೆಗೆ ಬಂದದ್ದು
ಪ್ರೇಮಿಯಂತಹ ಕವಿತೆ
ನೆಲ ನೀರು ಆಕಾಶದಂತ ಕವಿತೆ
ಅದು ಕಡಲಿನ ಹಾಗೆ ಮೊರೆಯುತ್ತಿತ್ತು
ನೆಲದ ಹಾಗೆ ಪರಿಮಳಿಸುತ್ತಿತ್ತು.
ಅದು ಆಕಾಶದಂತೆ
ಎಲ್ಲವನ್ನೂ ತಬ್ಬಿಕೊಂಡು
ಮೈ ಮರೆಯಿತು, ಮೈ ಮರೆಸಿತು.

(ಕವಿಗೋಷ್ಠಿಯೊಂದರಲ್ಲಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಯನ್ನು ಕೇಳಿ)


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...