Home / ಕವನ / ಕವಿತೆ / ರಸ್ತೆ ಹೋಗುವುದೆಲ್ಲಿಗೆ?

ರಸ್ತೆ ಹೋಗುವುದೆಲ್ಲಿಗೆ?

ಬೂದು ಬಣ್ಣದ ಚಳಿಗೆ
ಮುಂಜಾವದ ತುಟಿಯೊಡೆದಿದೆ
ಆಕಾಶ ಚಂದಿರನನ್ನು
ಹಣೆಯಲ್ಲಿ ಧರಿಸಿ ನಸುನಗುತಿದೆ
ಮಿಲ್ಲುಗಳಿಂದ ಹೊಗೆಯನ್ನೂ
ಹುಣ್ಣುಗಳನ್ನೂ
ಬಳುವಳಿಯಾಗಿ ಪಡೆದಿರುವ ಭದ್ರೆ
ಮುದಿಸೂಳೆಯ ಹಾಗೆ ನಡುಗುತ್ತಿದ್ದಾಳೆ
ಜಿಪುಣಶೆಟ್ಟಿ ಸೂರ್ಯನದು
ತೂಕದ ವ್ಯವಹಾರ
ಒಂದೊಂದೆ ಕಿರಣ ಚೆಲ್ಲುತ್ತಿದ್ದಾನೆ
ನೆಲದ ಕೊರಳಿಗೆ ಹಾರ.

ಅಂದವಾಗಿ ಅಲಂಕರಿಸಿಕೊಂಡು
ಅಚ್ಚುಕಟ್ಟಾಗಿ ಕುಳಿತುಕೊಂಡಿರುವ
ಹಾಲಿನ ಬಾಟಲಿಗಳಿಗೆ
ಮೈತುಂಬಾ ನಿರೀಕ್ಷೆ
ಯಾರೋ ಮಡಿವಂತರು
ಸಾರಿಸಿ ಗುಡಿಸಿದ ಅಂಗಳ
ಗುಬ್ಬಚ್ಚಿಗಳಿಗೆ ರಂಗಸಜ್ಜಿಕೆ.

ಕೈಗಾಡಿಯ ಬೈಟೂ ಕಾಫಿಯಲ್ಲಿ
ಬೋನಸ್ಸು ಮುಷ್ಕರ ಹಬೆಯಾಡುತ್ತಿದೆ
ದೂರದ ಚರ್ಚಿನ ಗಂಟೆ
ಎಂಟು ಹೊಡೆದಿದೆ.
ಪುಸ್ತಕದ ಬೆಟ್ಟ ಹೊತ್ತ
ಪುಟಾಣಿಗಳಿಂದ ಪ್ರಾರ್ಥನಾಗೀತೆ
ಕಾಡಿನ ಕಡವೆಯ ಮರಿಗಳು
ಊರ ಉದ್ಯಾನವನದ
ಕಬ್ಬಿಣದ ಕಂಬಗಳಿಗೆ
ಹತಾಶೆಯಿಂದ ಕೊರಳು ಉಜ್ಜುತ್ತಿವೆ
ಬತ್ತಲಾದ ಪುಟ್ಟ ಗಿಡಗಳು
ವನಮಹೋತ್ಸವದ ದಿನ ಎಣಿಸುತ್ತಿವೆ.

ಚಪ್ಪಲಿ, ಚೀಲ, ಕೊಡೆ
ಚದುರಿ ಚೆಲ್ಲಾಪಿಲ್ಲಿಯಾಗಿವೆ.
ವರದಕ್ಷಿಣೆ ತರದ ಹುಡುಗಿಯ ಹಾಗೆ
ಇಡಿಯಾಗಿ ಮೈಸುಟ್ಟುಕೊಂಡಿರುವ
ಕಾರು ಮುಖ ಮಾತ್ರ ಉಳಿಸಿಕೊಂಡಿದೆ.
ಕೈಗಾಡಿಗೆ ಕಾಲಿಲ್ಲ
ಶನಿದೇವರ ರಥ ಕಾಣೆಯಾಗಿದೆ.
ಚುರುಮುರಿ ಉಂಡೆಯನ್ನು
ಸುತ್ತಿರುವ ಮಾಸಲು ಹಾಳೆಯಲ್ಲಿ
ಉಲ್ಲಾಸಭರಿತ ಕವಿತೆ.

ಒಂದಿಷ್ಟು ಕದನ-ಕುತೂಹಲ
ಆಮೇಲೆ-
ಲಾಠಿ ಬೂಟುಗಳ ಟಪ ಟಪ
ಸದ್ದಿನ ಹಿನ್ನೆಲೆಯಲ್ಲಿ
ಟೋಪಿಗಳ ಶಾಂತಿಸಭೆ.

ಭಜನೆ, ತಾಳ, ಬೆಂಕಿ
ಸಣ್ಣಗೆ ಉಸಿರು ಕಟ್ಟಿಸುವ ಹೊಗೆ.
ಯಾರದ್ದೊ….
ಕೊನೆಯ ಮೆರವಣಿಗೆ.
ಸೀಳಿಹೋದ ಅಭಯಹಸ್ತದ ಮಗ್ಗುಲಲ್ಲಿ
ಚಿಂದಿಚಿಂದಿಯಾದ
ನೇಗಿಲು ಹೊತ್ತ ರೈತನ ಚಿತ್ರ.

ಕಣ್ಣರಳಿಸಿ ನೋಡುತ್ತಿದ್ದಾನೆ
ಹಸಿರು ರುಮಾಲಿನ ಹುಡುಗ
ಮಾಕ್ಸ್, ಬುದ್ಧ, ಗಾಂಧಿ
ಚಿಂತನೆಯಲ್ಲಿ ಗಡ್ಡ ಹಣ್ಣಾಗುತ್ತಿದೆ
ಮೈಮರೆತು ನಿಂತಿದ್ದಾನೆ ಹುಡುಗ!

ಗಾಳಿಯೊಳಗೆ ತೇಲಿದಂತೆ
ಚೆಲುವಾಗಿ ಹೂವಿನ ಹಾಗೆ
ಪರಿಮಳಿಸುತ್ತ ನಡೆದು ಬರುತ್ತಿದ್ದಾಳೆ
ಸೇಬು ಕೆನ್ನೆಯ ಹುಡುಗಿ
ಉತ್ಸವದ ಮೂರುತಿಯ ಹಾಗೆ ಶಿಸ್ತಾಗಿ
ಉತ್ಸಾಹ ಉಕ್ಕುಕ್ಕಿ ಚೆಲ್ಲುವ ಹಾಗೆ
ಹರಿದು ಬರುತ್ತಿದ್ದಾಳೆ ಹುಡುಗಿ
ಮೊಟ್ಟ ಮೊದಲ ಹೆಜ್ಜೆ ಇಟ್ಟ
ಮಗುವಿನ ಸಂಭ್ರಮದಲ್ಲಿ
ಅವರಿವರನ್ನು ಕೇಳುತ್ತಿದ್ದಾಳೆ….
ಈ ರಸ್ತೆ ಹೋಗುವುದೆಲ್ಲಿಗೆ?


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...