Home / ಕವನ / ಕವಿತೆ / ರಸ್ತೆ ಹೋಗುವುದೆಲ್ಲಿಗೆ?

ರಸ್ತೆ ಹೋಗುವುದೆಲ್ಲಿಗೆ?

ಬೂದು ಬಣ್ಣದ ಚಳಿಗೆ
ಮುಂಜಾವದ ತುಟಿಯೊಡೆದಿದೆ
ಆಕಾಶ ಚಂದಿರನನ್ನು
ಹಣೆಯಲ್ಲಿ ಧರಿಸಿ ನಸುನಗುತಿದೆ
ಮಿಲ್ಲುಗಳಿಂದ ಹೊಗೆಯನ್ನೂ
ಹುಣ್ಣುಗಳನ್ನೂ
ಬಳುವಳಿಯಾಗಿ ಪಡೆದಿರುವ ಭದ್ರೆ
ಮುದಿಸೂಳೆಯ ಹಾಗೆ ನಡುಗುತ್ತಿದ್ದಾಳೆ
ಜಿಪುಣಶೆಟ್ಟಿ ಸೂರ್ಯನದು
ತೂಕದ ವ್ಯವಹಾರ
ಒಂದೊಂದೆ ಕಿರಣ ಚೆಲ್ಲುತ್ತಿದ್ದಾನೆ
ನೆಲದ ಕೊರಳಿಗೆ ಹಾರ.

ಅಂದವಾಗಿ ಅಲಂಕರಿಸಿಕೊಂಡು
ಅಚ್ಚುಕಟ್ಟಾಗಿ ಕುಳಿತುಕೊಂಡಿರುವ
ಹಾಲಿನ ಬಾಟಲಿಗಳಿಗೆ
ಮೈತುಂಬಾ ನಿರೀಕ್ಷೆ
ಯಾರೋ ಮಡಿವಂತರು
ಸಾರಿಸಿ ಗುಡಿಸಿದ ಅಂಗಳ
ಗುಬ್ಬಚ್ಚಿಗಳಿಗೆ ರಂಗಸಜ್ಜಿಕೆ.

ಕೈಗಾಡಿಯ ಬೈಟೂ ಕಾಫಿಯಲ್ಲಿ
ಬೋನಸ್ಸು ಮುಷ್ಕರ ಹಬೆಯಾಡುತ್ತಿದೆ
ದೂರದ ಚರ್ಚಿನ ಗಂಟೆ
ಎಂಟು ಹೊಡೆದಿದೆ.
ಪುಸ್ತಕದ ಬೆಟ್ಟ ಹೊತ್ತ
ಪುಟಾಣಿಗಳಿಂದ ಪ್ರಾರ್ಥನಾಗೀತೆ
ಕಾಡಿನ ಕಡವೆಯ ಮರಿಗಳು
ಊರ ಉದ್ಯಾನವನದ
ಕಬ್ಬಿಣದ ಕಂಬಗಳಿಗೆ
ಹತಾಶೆಯಿಂದ ಕೊರಳು ಉಜ್ಜುತ್ತಿವೆ
ಬತ್ತಲಾದ ಪುಟ್ಟ ಗಿಡಗಳು
ವನಮಹೋತ್ಸವದ ದಿನ ಎಣಿಸುತ್ತಿವೆ.

ಚಪ್ಪಲಿ, ಚೀಲ, ಕೊಡೆ
ಚದುರಿ ಚೆಲ್ಲಾಪಿಲ್ಲಿಯಾಗಿವೆ.
ವರದಕ್ಷಿಣೆ ತರದ ಹುಡುಗಿಯ ಹಾಗೆ
ಇಡಿಯಾಗಿ ಮೈಸುಟ್ಟುಕೊಂಡಿರುವ
ಕಾರು ಮುಖ ಮಾತ್ರ ಉಳಿಸಿಕೊಂಡಿದೆ.
ಕೈಗಾಡಿಗೆ ಕಾಲಿಲ್ಲ
ಶನಿದೇವರ ರಥ ಕಾಣೆಯಾಗಿದೆ.
ಚುರುಮುರಿ ಉಂಡೆಯನ್ನು
ಸುತ್ತಿರುವ ಮಾಸಲು ಹಾಳೆಯಲ್ಲಿ
ಉಲ್ಲಾಸಭರಿತ ಕವಿತೆ.

ಒಂದಿಷ್ಟು ಕದನ-ಕುತೂಹಲ
ಆಮೇಲೆ-
ಲಾಠಿ ಬೂಟುಗಳ ಟಪ ಟಪ
ಸದ್ದಿನ ಹಿನ್ನೆಲೆಯಲ್ಲಿ
ಟೋಪಿಗಳ ಶಾಂತಿಸಭೆ.

ಭಜನೆ, ತಾಳ, ಬೆಂಕಿ
ಸಣ್ಣಗೆ ಉಸಿರು ಕಟ್ಟಿಸುವ ಹೊಗೆ.
ಯಾರದ್ದೊ….
ಕೊನೆಯ ಮೆರವಣಿಗೆ.
ಸೀಳಿಹೋದ ಅಭಯಹಸ್ತದ ಮಗ್ಗುಲಲ್ಲಿ
ಚಿಂದಿಚಿಂದಿಯಾದ
ನೇಗಿಲು ಹೊತ್ತ ರೈತನ ಚಿತ್ರ.

ಕಣ್ಣರಳಿಸಿ ನೋಡುತ್ತಿದ್ದಾನೆ
ಹಸಿರು ರುಮಾಲಿನ ಹುಡುಗ
ಮಾಕ್ಸ್, ಬುದ್ಧ, ಗಾಂಧಿ
ಚಿಂತನೆಯಲ್ಲಿ ಗಡ್ಡ ಹಣ್ಣಾಗುತ್ತಿದೆ
ಮೈಮರೆತು ನಿಂತಿದ್ದಾನೆ ಹುಡುಗ!

ಗಾಳಿಯೊಳಗೆ ತೇಲಿದಂತೆ
ಚೆಲುವಾಗಿ ಹೂವಿನ ಹಾಗೆ
ಪರಿಮಳಿಸುತ್ತ ನಡೆದು ಬರುತ್ತಿದ್ದಾಳೆ
ಸೇಬು ಕೆನ್ನೆಯ ಹುಡುಗಿ
ಉತ್ಸವದ ಮೂರುತಿಯ ಹಾಗೆ ಶಿಸ್ತಾಗಿ
ಉತ್ಸಾಹ ಉಕ್ಕುಕ್ಕಿ ಚೆಲ್ಲುವ ಹಾಗೆ
ಹರಿದು ಬರುತ್ತಿದ್ದಾಳೆ ಹುಡುಗಿ
ಮೊಟ್ಟ ಮೊದಲ ಹೆಜ್ಜೆ ಇಟ್ಟ
ಮಗುವಿನ ಸಂಭ್ರಮದಲ್ಲಿ
ಅವರಿವರನ್ನು ಕೇಳುತ್ತಿದ್ದಾಳೆ….
ಈ ರಸ್ತೆ ಹೋಗುವುದೆಲ್ಲಿಗೆ?


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...