Home / ಕವನ / ಕವಿತೆ / ಮೃತ್ಯು

ಮೃತ್ಯು

ಪ್ರತಿದಿನ, ಪ್ರತಿಕ್ಷಣ
ಅದೇ ಕೆಲಸ;
ಹುಟ್ಟಿನ ಮನೆಗೆ
ಭೇಟಿ ಕೊಡುವುದು,
ಸಂಭ್ರಮದ ತುಣುಕನ್ನು
ಮೆದ್ದು, ತನ್ನದೊಂದು
ಬೀಜ ನೆಟ್ಟು, ಗುಟ್ಟಾಗಿ
ಓಡಿಬರುವುದು.
ಮತ್ತೆ ಅದೇ ಕೆಲಸ
ಕಾಯುವುದು
ನೆಟ್ಟ ಬೀಜ ಫಲಕೊಟ್ಟು
ಹಣ್ಣಾಗಿ ಕಳಚಿಕೊಳ್ಳುವುದನ್ನೇ
ಕಣ್ಣಾಗಿ ಕಾಯುವುದು.

ಮತ್ತೆ ಅದೇ ಕೆಲಸ
ಆಯುವುದು
ಕವಡೆ ಕಣ್ಣುಗಳನ್ನು
ನಾರುವ ಹುಣ್ಣುಗಳನ್ನು
ತಲೆಬುರುಡೆ, ಎದೆಗೂಡು
ಅಳಿದುಳಿದ ಹಾಡುಗಳನ್ನೂ
ಆಯುವುದು.

ನಿತ್ಯದ ಕೆಲಸದ ಮಧ್ಯೆ
ತುರ್ತಿನ ಕರೆ ಬಂದಲ್ಲಿ….
ಓಡಬೇಕು ಬಿರುಗಾಳಿಯಾಗಿ,
ಇಲ್ಲ. ಯಾವುದಾದರೊಂದು
ನದಿಯೊಳಗೆ ಅವಿತು
ಉಕ್ಕಬೇಕು ಪ್ರವಾಹವಾಗಿ
ಅಥವ ಉಲ್ಕೆಯಾಗಿ
ಉರಿದು ಕಲ್ಲುಗಳ
ಮಳೆಗರೆಯಬೇಕು.

ಒಮ್ಮೊಮ್ಮೆ ಅನಿಸುತ್ತೆ
ಎಲ್ಲ ಮರೆತು
ಎಲ್ಲಾದರೊಂದು ಕಡೆ
ದೂರ ಒಂಟಿಯಾಗಿ
ಮರುಭೂಮಿಯ ಹಾಗೆ
ನಿಂತು ಬಿಡಬೇಕೆಂದು.


Tagged:

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...