ಮೃತ್ಯು

ಪ್ರತಿದಿನ, ಪ್ರತಿಕ್ಷಣ
ಅದೇ ಕೆಲಸ;
ಹುಟ್ಟಿನ ಮನೆಗೆ
ಭೇಟಿ ಕೊಡುವುದು,
ಸಂಭ್ರಮದ ತುಣುಕನ್ನು
ಮೆದ್ದು, ತನ್ನದೊಂದು
ಬೀಜ ನೆಟ್ಟು, ಗುಟ್ಟಾಗಿ
ಓಡಿಬರುವುದು.
ಮತ್ತೆ ಅದೇ ಕೆಲಸ
ಕಾಯುವುದು
ನೆಟ್ಟ ಬೀಜ ಫಲಕೊಟ್ಟು
ಹಣ್ಣಾಗಿ ಕಳಚಿಕೊಳ್ಳುವುದನ್ನೇ
ಕಣ್ಣಾಗಿ ಕಾಯುವುದು.

ಮತ್ತೆ ಅದೇ ಕೆಲಸ
ಆಯುವುದು
ಕವಡೆ ಕಣ್ಣುಗಳನ್ನು
ನಾರುವ ಹುಣ್ಣುಗಳನ್ನು
ತಲೆಬುರುಡೆ, ಎದೆಗೂಡು
ಅಳಿದುಳಿದ ಹಾಡುಗಳನ್ನೂ
ಆಯುವುದು.

ನಿತ್ಯದ ಕೆಲಸದ ಮಧ್ಯೆ
ತುರ್ತಿನ ಕರೆ ಬಂದಲ್ಲಿ….
ಓಡಬೇಕು ಬಿರುಗಾಳಿಯಾಗಿ,
ಇಲ್ಲ. ಯಾವುದಾದರೊಂದು
ನದಿಯೊಳಗೆ ಅವಿತು
ಉಕ್ಕಬೇಕು ಪ್ರವಾಹವಾಗಿ
ಅಥವ ಉಲ್ಕೆಯಾಗಿ
ಉರಿದು ಕಲ್ಲುಗಳ
ಮಳೆಗರೆಯಬೇಕು.

ಒಮ್ಮೊಮ್ಮೆ ಅನಿಸುತ್ತೆ
ಎಲ್ಲ ಮರೆತು
ಎಲ್ಲಾದರೊಂದು ಕಡೆ
ದೂರ ಒಂಟಿಯಾಗಿ
ಮರುಭೂಮಿಯ ಹಾಗೆ
ನಿಂತು ಬಿಡಬೇಕೆಂದು.


Previous post ಅಜ್ಜಿ ಕಾಲಿಗೆ ದೀಪ*
Next post ಸ್ವಾತಂತ್ರ್ಯ- ಕನಸು ನನಸು

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys