ನಡಿಯೋ ದೇವರ ಚಾಕರಿಗೆ

ನಡಿಯೋ ದೇವರ ಚಾಕರಿಗೆ ಮುಕ್ತಿ-
ಗೊಡೆಯ ಖಾದರಲಿಂಗ ನೆಲಸಿರ್ಪ ಗಿರಿಗೆ                    ||ಪ||

ಎಡಬಲಕೆ ನೋಡುತಲಿ ಷಣ್ಮುಖ
ಒಡಲೊಳಗೆ ತನ್ನ ಮನವ ಸೇರಿಸಿ
ಕಡು ವಿಷಯ ಕರುಣಾಬ್ದಿಗಳ ಕೈ
ಹೊಡೆದು ಮುಂದಕೆ ಒಡುತೋಡುತ                        ||ಅ.ಪ.||

ಬಯಲೊಳು ಬಯಲು ಪುಟ್ಟಿಸಿದಾ ನಿರ್‍-
ಬಯಲಿನೊಳಗೆ ತನ್ನಾಲಯವ ಕಟ್ಟಿಸಿದಾ
ಭವನಿವಾರಣ ಭಕ್ತವತ್ಸಲ
ಅಹುದೆನಿಸಿ ನಿಶ್ಚಯಿಸಿ ಮನದೊಳು
ತವಕ ತೂರ್ಯದ ಲಕ್ಷದಿಂದಲಿ
ಭವಸಮುದ್ರವ ದಾಂಟು ದಾಟುತ                            ||೧||

ಆ ಮಹಾಮಹಿಮ ಪೇಳಿದನು ಈ
ಭೂಮಿಯೋಳ್ ಹುಲಗೂರ ಗ್ರಾಮಕಿಳಿದನು
ನಾಮ ರೂಪ ಕ್ರಿಯಾ ಕಲಾಪದಿ
ಸೀಮೆಯನು ಗೆಲಿದಂಥ ಸ್ವಾಮಿಯ
ನೇಮ ಹಿಡಿದಾತ್ಮನೊಳು ಭಜಿಸುತ
ಕಾಮ ಕ್ರೋಧವ ಕಾಲಿಲೊದೆಯುತ                        ||೨||

ಜೀವ ಪರಮರೊಂದುಗೂಡಿ ಅನು
ಭಾವದಿ ಸಾಯ್ಯುಜ್ಯ ಪದವಿಯ ಬೇಡಿ
ಕಾಯಿ ಸಕ್ಕರಿ ಊದನೀಡುತ
ಜಿವ್ಹೆಯೊಳು ಮಂತ್ರವನು ಜಪಿಸುತ
ಠಾವು ಶಿಶುವಿನಾಳಿಂದ ಹೊರಟು
ಮಾಯಿಯನು ಮುರಿದೊತ್ತಿ ಮೌಜಿಲೆ                        ||೩||
*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾದರಿ ಸದಾವರಿ
Next post ಹಮ್ ತೋ ದೇಖಾ ಮೊಹಮ್ಮದ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…