ನಡಿಯೋ ದೇವರ ಚಾಕರಿಗೆ

ನಡಿಯೋ ದೇವರ ಚಾಕರಿಗೆ ಮುಕ್ತಿ-
ಗೊಡೆಯ ಖಾದರಲಿಂಗ ನೆಲಸಿರ್ಪ ಗಿರಿಗೆ                    ||ಪ||

ಎಡಬಲಕೆ ನೋಡುತಲಿ ಷಣ್ಮುಖ
ಒಡಲೊಳಗೆ ತನ್ನ ಮನವ ಸೇರಿಸಿ
ಕಡು ವಿಷಯ ಕರುಣಾಬ್ದಿಗಳ ಕೈ
ಹೊಡೆದು ಮುಂದಕೆ ಒಡುತೋಡುತ                        ||ಅ.ಪ.||

ಬಯಲೊಳು ಬಯಲು ಪುಟ್ಟಿಸಿದಾ ನಿರ್‍-
ಬಯಲಿನೊಳಗೆ ತನ್ನಾಲಯವ ಕಟ್ಟಿಸಿದಾ
ಭವನಿವಾರಣ ಭಕ್ತವತ್ಸಲ
ಅಹುದೆನಿಸಿ ನಿಶ್ಚಯಿಸಿ ಮನದೊಳು
ತವಕ ತೂರ್ಯದ ಲಕ್ಷದಿಂದಲಿ
ಭವಸಮುದ್ರವ ದಾಂಟು ದಾಟುತ                            ||೧||

ಆ ಮಹಾಮಹಿಮ ಪೇಳಿದನು ಈ
ಭೂಮಿಯೋಳ್ ಹುಲಗೂರ ಗ್ರಾಮಕಿಳಿದನು
ನಾಮ ರೂಪ ಕ್ರಿಯಾ ಕಲಾಪದಿ
ಸೀಮೆಯನು ಗೆಲಿದಂಥ ಸ್ವಾಮಿಯ
ನೇಮ ಹಿಡಿದಾತ್ಮನೊಳು ಭಜಿಸುತ
ಕಾಮ ಕ್ರೋಧವ ಕಾಲಿಲೊದೆಯುತ                        ||೨||

ಜೀವ ಪರಮರೊಂದುಗೂಡಿ ಅನು
ಭಾವದಿ ಸಾಯ್ಯುಜ್ಯ ಪದವಿಯ ಬೇಡಿ
ಕಾಯಿ ಸಕ್ಕರಿ ಊದನೀಡುತ
ಜಿವ್ಹೆಯೊಳು ಮಂತ್ರವನು ಜಪಿಸುತ
ಠಾವು ಶಿಶುವಿನಾಳಿಂದ ಹೊರಟು
ಮಾಯಿಯನು ಮುರಿದೊತ್ತಿ ಮೌಜಿಲೆ                        ||೩||
*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾದರಿ ಸದಾವರಿ
Next post ಹಮ್ ತೋ ದೇಖಾ ಮೊಹಮ್ಮದ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…