ನಡಿಯೋ ದೇವರ ಚಾಕರಿಗೆ

ನಡಿಯೋ ದೇವರ ಚಾಕರಿಗೆ ಮುಕ್ತಿ-
ಗೊಡೆಯ ಖಾದರಲಿಂಗ ನೆಲಸಿರ್ಪ ಗಿರಿಗೆ                    ||ಪ||

ಎಡಬಲಕೆ ನೋಡುತಲಿ ಷಣ್ಮುಖ
ಒಡಲೊಳಗೆ ತನ್ನ ಮನವ ಸೇರಿಸಿ
ಕಡು ವಿಷಯ ಕರುಣಾಬ್ದಿಗಳ ಕೈ
ಹೊಡೆದು ಮುಂದಕೆ ಒಡುತೋಡುತ                        ||ಅ.ಪ.||

ಬಯಲೊಳು ಬಯಲು ಪುಟ್ಟಿಸಿದಾ ನಿರ್‍-
ಬಯಲಿನೊಳಗೆ ತನ್ನಾಲಯವ ಕಟ್ಟಿಸಿದಾ
ಭವನಿವಾರಣ ಭಕ್ತವತ್ಸಲ
ಅಹುದೆನಿಸಿ ನಿಶ್ಚಯಿಸಿ ಮನದೊಳು
ತವಕ ತೂರ್ಯದ ಲಕ್ಷದಿಂದಲಿ
ಭವಸಮುದ್ರವ ದಾಂಟು ದಾಟುತ                            ||೧||

ಆ ಮಹಾಮಹಿಮ ಪೇಳಿದನು ಈ
ಭೂಮಿಯೋಳ್ ಹುಲಗೂರ ಗ್ರಾಮಕಿಳಿದನು
ನಾಮ ರೂಪ ಕ್ರಿಯಾ ಕಲಾಪದಿ
ಸೀಮೆಯನು ಗೆಲಿದಂಥ ಸ್ವಾಮಿಯ
ನೇಮ ಹಿಡಿದಾತ್ಮನೊಳು ಭಜಿಸುತ
ಕಾಮ ಕ್ರೋಧವ ಕಾಲಿಲೊದೆಯುತ                        ||೨||

ಜೀವ ಪರಮರೊಂದುಗೂಡಿ ಅನು
ಭಾವದಿ ಸಾಯ್ಯುಜ್ಯ ಪದವಿಯ ಬೇಡಿ
ಕಾಯಿ ಸಕ್ಕರಿ ಊದನೀಡುತ
ಜಿವ್ಹೆಯೊಳು ಮಂತ್ರವನು ಜಪಿಸುತ
ಠಾವು ಶಿಶುವಿನಾಳಿಂದ ಹೊರಟು
ಮಾಯಿಯನು ಮುರಿದೊತ್ತಿ ಮೌಜಿಲೆ                        ||೩||
*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾದರಿ ಸದಾವರಿ
Next post ಹಮ್ ತೋ ದೇಖಾ ಮೊಹಮ್ಮದ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

cheap jordans|wholesale air max|wholesale jordans|wholesale jewelry|wholesale jerseys