Home / ಕವನ / ಕವಿತೆ / ಕಾರ್ತೀಕ

ಕಾರ್ತೀಕ

ಅಶ್ವಯುಜ ಸೂರ್ಯ ಚಿಮ್ಮಿದಾಗ
ಕಿರಣಗಳು ಬೆಳಕ ಬೀಜಗಳು
ರೆಂಬೆಕೊಂಬೆಗಳ ಪಣತಿಗಳಲಿ
ಮಿಂಚುಗೊಂಚಲುಗಳು ಪತಂಗಗಳು
ಭೂಮಿ ಬಾನಂಗಳದಲಿ ಚಿನಕುರುಳಿಗಳು.

ಸಂಭ್ರಮದ ಅಲೆಅಲೆಗಳಲಿ ತೇಲಿವೆ
ನಮ್ಮೆಲ್ಲರ ಮಿನುಗು ಕಣ್ಣೋಟಗಳು
ಮಾತು ಹಾಡಿನ ಸಿರಿಶುಭದ ಸುಗ್ಗೀ
ಪೇಟೆತುಂಬ ಹರಡಿಹಾಸಿದ ಗೌಜುಗದ್ದಲ
ಬೀದಿ ತುಂಬ ಮಿನುಗುವ ಜ್ಯೋತಿರ್ಮಯಿಗಳು.

ತೆಳುಫರದೆಯ ತಿಳಿಮಂಜು ಹನಿಗಳು
ತಬ್ಬಿ ಮುದ್ದಿಸಿಕೊಂಡ ಸೂರ್ಯಕಾಂತಿ ಚೆಲುವು
ಬೆಳದಿಂಗಳ ಚಂದಿರ ಮುನಿಸು ಮುರಿದು
ಸೇವಂತಿಗೆ ಹೂಗಳ ಹರಿದ ಗಂಧಗಾಳಿ
ತೇವತೀಡಿ ನೇವರಿಸಿಕೊಂಡ ಗರಿಕೆ ಹಸಿರುಸೂಸಿ.

ಕಾಲ ಕ್ರಿಯೆ ಸ್ಥಳ ಮೇಳೈಸಿ ಸಹಜಪ್ರೀತಿ
ಅರಳಿದ ಪ್ರೇಮ ಅತಿಮಧುರ ಶಿಲೆಸುಂದರ
ಸಾಕ್ಷೀ ಪ್ರಜ್ಞೆಯಲಿ ಹುಟ್ಟಿದ ಬೆಳಕಭಾವ
ಕಲೆ ಸುಂದರ ಅದು ಮಂದಿರ ಸಂತಮರ
ಬಂಗಾರದ ಕಿರಣಗಳ ಸೂಸುವ ದೀಪಾವಳಿ.

ಮಂಜು ಮುಸುಕಿದ ಸಂಜೆ ಇಳಿದ ರಾಗ
ಮಾಲಕಂಸ ಹಾಡಿದ ಹೃದಯ ಇಂಪು
ಹೊಸ ಹುರುಪಿನಲಿ ಕನಸುಗಳು ತೇಲಿ
ಹಗಲು ಹೊಳೆದು ರಾತ್ರಿ ಉಳಿದ ಜಗದಸ್ನಾನ
ಇನ್ನು ಹಾರಬಹುದು ರೆಕ್ಕೆ ಬಿಚ್ಚಿದ ಹಕ್ಕಿ ಬಾನತುಂಬ.

*****

Tagged:

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...