Home / ಕವನ / ಕವಿತೆ / ಸಾಕರಿ ಕಟ್ಟು ಮತ್ತು ಹೆಂಗಸು

ಸಾಕರಿ ಕಟ್ಟು ಮತ್ತು ಹೆಂಗಸು

ಮಬ್ಬಗತ್ತಲೆವರೆಗೂ ತದ್ವತ್
ಕೆಲಸ
ಸಾಕರಿ ಕೋಲಿಗೂ
ಸಾಕರಿ ಹುಲ್ಲಿಗೂ ಹಗೆ
ತೀರಿಸುವ ಅವಳ ಕೈ ಕುಣಿತ

ಭತ್ತ ಬಡಿದ ಹುಲ್ಲಿಗೆ ಕಟ್ಟು ಕಟ್ಟುವ ಆಕೆ
ಸಾಕರಿ ಕಟ್ಟಿನ ಲೆಕ್ಕ
ಇಡುತ್ತಾಳೆ
ಒಡೆಯ ಕೊಡುವ ಕೂಲಿಗಾಗಿ

ಬೊಕ್ಕೆಯೆದ್ದ ಕೈಗಳು
ಬಿರುಸಾಗುತ್ತಿವೆ ಕಟ್ಟು ಬಡಿದು
ಕ್ರಮೇಣ

ಆಗಾಗ ಒಡತಿಯಿಂದ ಎಣ್ಣೆ ಬೇಡಿ ಪಡೆವ ಆಕೆ
ತಿಕ್ಕಿಕೊಳ್ಳುತ್ತಾಳೆ ಕೈಗಳಿಗೆ
“ಹಾಯ್” ಎನ್ನುವಂತೆ
“ನನಗೆ ನಾನೇ, ಗೋಡೆಗೆ ಮಣ್ಣೆ”
ಉಸುರುತ್ತಾಳೆ ಆಗಾಗ

ಕೇಯ್ಯಿಂದ ಬೇರ್ಪಟ್ಟ ಭತ್ತಕ್ಕೆ
ಕಣಜಕ್ಕೆ ಹಾರುವ ಆಸೆ
ಜೊಳ್ಳು ಸೇರದಂತೆ ಹೊಟ್ಟು
ಹಾರಿಸುವಾಕೆಯ ಮಂತ್ರ ಮುಗ್ದ ಶೈಲಿ
ಒರೆ ಸೊಂಟದ ಹೆಣ್ಣ
ಕೈಬಳೆಯ ಲಯಬದ್ಧ ಉಲಿತ
ಗಾನ ಲೋಕದ ಪರ್ಯಾಯ
ಮತ್ತೀಗ ಕಳವನ್ನೆಲ್ಲಾ ಗುಡಿಸಿ
ಇಡುತ್ತಾಳೆ ಅರೆಬೆರೆ ಜೊಳ್ಳು
ಬೆರೆತ ಭತ್ತವನ್ನೆಲ್ಲಾ ಒಟ್ಟು
ಮಾಡಿ ಸೇರಿಸುತ್ತಾಳೆ ಕೈ ಚೀಲಕ್ಕೆ
ನಡಿಗೆ ಮನೆ ಕಡೆಗೆ

ದಣಪೆಯಲ್ಲಿ ದಡಿಯ
ಯರ್‍ರಾಬಿರ್‍ರಿ ಕುಡಿದು
ತಡಕ್ಕಾಡುತ್ತಿದ್ದಾನೆ ಮನೆ ಬಾಗಿಲು

ಭಾಗ್ಯ ಜ್ಯೋತಿಯ ಬೆಳಕಿನಲ್ಲಿ
ತಂದ ಭತ್ತವ ಕುಟ್ಟಿ
ಅನ್ನಕ್ಕಿಟ್ಟಿದ್ದಾಳೆ ಆಕೆ
ಇರುಳುಗತ್ತಲೆಯಲ್ಲಿ ಸಂಚಿಯ
ಕವಳ ತೆಗೆದು ಬಾಯಿಗಿಡುತ್ತಾಳೆ
ಪುರಸೊತ್ತು ಮಾಡಿ

ಅನ್ನದ ನಿಗಿ ನಿಗಿ ಬೆಂಕಿಯ
ಪಕ್ಕ ಬೆಚ್ಚಗೆ ಕುಳಿತು ಮಗ್ಗಿ
ಓದುತ್ತಿವೆ ಪುಟಾಣಿಗಳೆರಡು


Tagged:

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...