Home / ಕವನ / ಕವಿತೆ / ಸಾಕರಿ ಕಟ್ಟು ಮತ್ತು ಹೆಂಗಸು

ಸಾಕರಿ ಕಟ್ಟು ಮತ್ತು ಹೆಂಗಸು

ಮಬ್ಬಗತ್ತಲೆವರೆಗೂ ತದ್ವತ್
ಕೆಲಸ
ಸಾಕರಿ ಕೋಲಿಗೂ
ಸಾಕರಿ ಹುಲ್ಲಿಗೂ ಹಗೆ
ತೀರಿಸುವ ಅವಳ ಕೈ ಕುಣಿತ

ಭತ್ತ ಬಡಿದ ಹುಲ್ಲಿಗೆ ಕಟ್ಟು ಕಟ್ಟುವ ಆಕೆ
ಸಾಕರಿ ಕಟ್ಟಿನ ಲೆಕ್ಕ
ಇಡುತ್ತಾಳೆ
ಒಡೆಯ ಕೊಡುವ ಕೂಲಿಗಾಗಿ

ಬೊಕ್ಕೆಯೆದ್ದ ಕೈಗಳು
ಬಿರುಸಾಗುತ್ತಿವೆ ಕಟ್ಟು ಬಡಿದು
ಕ್ರಮೇಣ

ಆಗಾಗ ಒಡತಿಯಿಂದ ಎಣ್ಣೆ ಬೇಡಿ ಪಡೆವ ಆಕೆ
ತಿಕ್ಕಿಕೊಳ್ಳುತ್ತಾಳೆ ಕೈಗಳಿಗೆ
“ಹಾಯ್” ಎನ್ನುವಂತೆ
“ನನಗೆ ನಾನೇ, ಗೋಡೆಗೆ ಮಣ್ಣೆ”
ಉಸುರುತ್ತಾಳೆ ಆಗಾಗ

ಕೇಯ್ಯಿಂದ ಬೇರ್ಪಟ್ಟ ಭತ್ತಕ್ಕೆ
ಕಣಜಕ್ಕೆ ಹಾರುವ ಆಸೆ
ಜೊಳ್ಳು ಸೇರದಂತೆ ಹೊಟ್ಟು
ಹಾರಿಸುವಾಕೆಯ ಮಂತ್ರ ಮುಗ್ದ ಶೈಲಿ
ಒರೆ ಸೊಂಟದ ಹೆಣ್ಣ
ಕೈಬಳೆಯ ಲಯಬದ್ಧ ಉಲಿತ
ಗಾನ ಲೋಕದ ಪರ್ಯಾಯ
ಮತ್ತೀಗ ಕಳವನ್ನೆಲ್ಲಾ ಗುಡಿಸಿ
ಇಡುತ್ತಾಳೆ ಅರೆಬೆರೆ ಜೊಳ್ಳು
ಬೆರೆತ ಭತ್ತವನ್ನೆಲ್ಲಾ ಒಟ್ಟು
ಮಾಡಿ ಸೇರಿಸುತ್ತಾಳೆ ಕೈ ಚೀಲಕ್ಕೆ
ನಡಿಗೆ ಮನೆ ಕಡೆಗೆ

ದಣಪೆಯಲ್ಲಿ ದಡಿಯ
ಯರ್‍ರಾಬಿರ್‍ರಿ ಕುಡಿದು
ತಡಕ್ಕಾಡುತ್ತಿದ್ದಾನೆ ಮನೆ ಬಾಗಿಲು

ಭಾಗ್ಯ ಜ್ಯೋತಿಯ ಬೆಳಕಿನಲ್ಲಿ
ತಂದ ಭತ್ತವ ಕುಟ್ಟಿ
ಅನ್ನಕ್ಕಿಟ್ಟಿದ್ದಾಳೆ ಆಕೆ
ಇರುಳುಗತ್ತಲೆಯಲ್ಲಿ ಸಂಚಿಯ
ಕವಳ ತೆಗೆದು ಬಾಯಿಗಿಡುತ್ತಾಳೆ
ಪುರಸೊತ್ತು ಮಾಡಿ

ಅನ್ನದ ನಿಗಿ ನಿಗಿ ಬೆಂಕಿಯ
ಪಕ್ಕ ಬೆಚ್ಚಗೆ ಕುಳಿತು ಮಗ್ಗಿ
ಓದುತ್ತಿವೆ ಪುಟಾಣಿಗಳೆರಡು


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...