Home / ಕವನ / ಕವಿತೆ / ಗೆಳತಿ

ಗೆಳತಿ

ಏಕೆ ಗೆಳತಿ ಮನ
ಬಾಗಿಲವರೆಗೂ ಬಂದು
ತಟ್ಟಿ ಕರೆಯಲಿಲ್ಲ
ನಿನ್ನ ಭಾವನೆಗಳೇಕೆ
ನನ್ನವರೆಗೂ ಮುಟ್ಟಲೇ ಇಲ್ಲ
ನನಗೂ ಇತ್ತಲ್ಲ ಆಸೆ
ನಿನ್ನಂತೆ

ಗೆಳತಿಯಾಗಿ ಬಂದವಳು
ಪ್ರೇಮಿಯಾಗಿ ಬರಲೆಂದು
ಜೀವನಕೆ ಜೊತೆಯಾಗಲೆಂದೆ
ಅದಕ್ಕೇಕೆ ತಣ್ಣೀರನ್ನೆರೆಚಿದೆ?
ಕಡೆತನಕ ಬಗೆಗೊಡು
ಹೊಗೆಗೂಡಾಗಲೆಂದೇ?

ಬಣ್ಣದ ಚಿತ್ತಾರ ಬಿಡಿಸ
ಹೊರಟಾಗ ಕಪ್ಪು ಮಸಿ
ಚೆಲ್ಲಿ ಕಲೆಯಾಯಿತೆ?

ವ್ಯಥೆ ಬೇಡ ಗೆಳತಿ
ನವ್ಯ ಕಲೆಯ ರೀತಿ
ಗೆರೆ ಎಳೆದು ಚಿತ್ರವಾಗಿಸುವೆ
ಹೊಗೆಗೂಡ ಕಿಂಡಿಯನು
ತೆರೆದು ಬಿಡು
ಶುದ್ಧವಾತ ಹರಿದು ಬರಲಿ
ಪ್ರೇಮವಿರದಿರೆ,
ಸ್ನೇಹವಾದರೂ ಇರಲಿ ಈ ಪರಿ

ಸ್ವಾರ್ಥದ ನೆರಳಿಲ್ಲ
ಏಕತಾನೆತೆಯ ಕೊರಗಿಲ್ಲ
ವಿಳಂಬ ಬೇಡ ಗೆಳತಿ
ಈಗಲಾದರೂ ಪ್ರೇಮಸೌಧದ
ತಳಪಾಯದ ಮೇಲೆ
ಕಟ್ಟೋ ನಡಿ ಸ್ನೇಹಸೌಧ

*****

Tagged:

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...