Home / ಕವನ / ಕವಿತೆ / ಕಾಲನ ಕರೆ

ಕಾಲನ ಕರೆ

ಅತಿ ಜರೂರು ಕರೆ
ಓಗೊಟ್ಟು ನಡೆಯಲೇ ಬೇಕು
ದೂಡಲಾಗದು ಮುಂದೆ
ಹೇಳಲಾಗದು ನೂರು ನೆಪ

ಅವ ದೂರ್ತನೆಂದರೂ ಬದುಕಿಗೆ
ಬಾರದಿರೆ ಸಾಕೆಂದರೂ
ದುತ್ತೆಂದು ಹೆಗಲೇರಿ
ತಳ್ಳಿ ಬಿಡುವ ಕೂಪಕ್ಕೆ

ಮುಗ್ಧ ಎಸಳುಗಳ ಕೂಡ
ಕೊಚ್ಚಿ ಹಾಕುವ ಕ್ರೂರ
ಕಣ್ಣೀರ ಧಾರೆಗೂ
ಆರ್ತನಾದಕ್ಕೂ ಕಿವುಡನವ

ಚಿಗುರೆಲೆಗೆ ಶರದೃತುವಿನಂತೆ
ಕರುಣೆಯಿಲ್ಲದೆ ಕರಕಲಾಗಿಸುವ
ಬಯಕೆ ಹೊತ್ತವ

ಎಷ್ಟೊಂದು ಕನಸುಗಳಿವೆ
ಮುಸ್ಸಂಜೆಯ ಮಾತುಗಳು ಬಾಕಿಯಿವೆ
ನಕ್ಷತ್ರಗಳ ಹಾದಿಯಲಿ ಬಯಕೆಗಳ ಮೂಟೆ
ಮಾರಲಿದೆ, ಕೊಳ್ಳಲಿದೆ
ಮೈಮನಗಳ ಸುಳಿಯಲಿ ತೇಲುವುದಿದೆ

ಅದಕ್ಕೆ
ಕೆಂಡ ಮಾರುವವನ ಸಹವಾಸ ಬೇಕಿಲ್ಲ ಎಂದರೂ
ಸಾರಿ ಬರುವ ಸರದಾರನ
ಅಪ್ಪುಗೆಯ ತೆಕ್ಕೆಗೆ ಬಿದ್ದರೆ – ಬಲಿ


Tagged:

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...