Home / ಕವನ / ಕವಿತೆ / ಕಾಡುತ್ತವೆ ನೆನಪು

ಕಾಡುತ್ತವೆ ನೆನಪು

ಹಿತ್ತಲ ಬದಿಯಲಿ ಬೆಳೆದ ಮೂಲಿಕೆಗಳನ್ನು ಆಯ್ದು
ತಂದು ಜೀರಿಗೆ ಬೆರೆಸಿ ಕುದಿಸಿ ಇಡುತ್ತಾಳೆ ಆಕೆ
ತನ್ನ ಕಾಡಿದ ಅದೇ ಬಾಲ್ಯದ ನೋವು
ಇವರ ಕಾಡದಿರಲಿ ಎಂದು.
ಕಾಡುತ್ತವೆ ನೆನಪು

ನಿನ್ನೆ ನೆನೆಯಿಟ್ಟ ಕಾಳುಗಳು ಇಂದು
ಮೊಳಕೆಯೊಡೆದಿವೆ
ಜೋಪಾನವಾಗಿ ತೆಗೆದಿಡುವ ಕೆಲಸವಾಗಬೇಕು.
ಮೊಳಕೆ ಮುರಿಯದಂತೆ ಜಾಗೃತಿಯಲ್ಲಿ,
ದಷ್ಟಪುಷ್ಟ ಸಸಿಗಳು ಧೃಢಮೊಳಕೆಯಿಂದ
ಮಾತ್ರ ಸಾಧ್ಯ-ಎನ್ನುತ್ತಿರುತ್ತಾಳೆ.
ಅದು ಆಕೆಗೆ ಗೊತ್ತು.
ಕಾಡುತ್ತವೆ ನೆನಪು

ನೂಲಿನಂತೆ ಸೀರೆ ಆಗಬೇಕೆಂದು
ಚೆಂದದ ಗಟ್ಟಿನೂಲಲ್ಲೇ ನೇಯ್ದರೂ ಈಗೀಗ
ಸೀರೆಗಿಲ್ಲ ಅದೇ ಆಕಾರ ಬಣ್ಣ ಧಾಡಸಿತನ
ಎತ್ತೆತ್ತಿ ಒಗೆದರೂ ಹರಿಯದ ಆ ಕಾಲದ
ಸೀರೆ ಇವಲ್ಲ ಕಸಿವಿಸಿಯಾಗುತ್ತಾಳೆ ಆಕೆ
ಬರಿ ಚೆಂದ ಅಲ್ಲ ಬದುಕು ಆತ್ಮಬಲ ಬೇಕು
ಸ್ಥೈರ್ಯಕ್ಕೆ ಇಂಬು ಆಕೆ
ಕಾಡುತ್ತವೆ ನೆನಪು

ಎಂದೋ ಎಡವಿಕೊಂಡ ಕಾಲು
ನೋವು ಮರುಕಳಿಸಿ ಘಾಸಿ ಮಾಡುತ್ತವೆ.
ತಣ್ನೀರನ್ನಾದರೂ ತಣಿಸಿ ಕುಡಿಯಲು ಹೇಳು
ಹೇಳುತ್ತಾನೆ ಆಕೆಗೆ
ಕೇಳಲೆಂದೆ – ಎತ್ತರಿಸಿದ ದನಿಯಲ್ಲಿ
ಬೇಡಿದ್ದನ್ನು ಕೊಡಿಸಬೇಡ
ತಾಕೀತು ಮಾಡುತ್ತಾನೆ ಆಗಾಗ
ಚಟವಾದೀತು, ಹಟವಾದೀತು ಬಯಕೆಗಳು
ಬೆಳೆದಂತೆ – ಎನ್ನುತ್ತಾನೆ
ರಾಗಕ್ಕೆ ತೆರನಾದ ತಾಳ ಆಕೆಯದು.
ಕಾಡುತ್ತವೆ ನೆನಪು

ಬಿರುಸಾದ ಗಾಳಿಗೂ ಕೂಡ ಗಿಡಗಳು
ಬಗ್ಗಿಲ್ಲ. ಸ್ವಲ್ಪ ಸೊಟ್ಟಗಾದರೂ ಅರೆಗಳಿಗೆ
ನೆಟ್ಟಗೆ ನಿಲ್ಲುತ್ತವೆ ಮರುಗಳಿಗೆ
ಬಯಲ ಗಿಡಗಳಿಗೆ ಗಾಳಿ ಎದುರಿಸಿ ಗೊತ್ತು.
ಬೆಳೆಯಬೇಕು, ಕಲಿಯಲಿ ಇವರೂ ಅವರಂತೆ
ಎನ್ನುತ್ತಾನೆ ಆತ
ಕಾಡುತ್ತವೆ ನೆನಪು

ತೊಗಲ ಹೊದಿಕೆಯ ಹೊದಿಸಿ
ರಕ್ತಕ್ಕೆ ಕೆಂಪು ಸುರಿದವರು ಅವರು
ಕಾಡುತ್ತವೆ ನೆನಪು
ಕಾಡುತ್ತಲೇ ಇರುತ್ತವೆ ನೆನಪು.
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...