Home / ಕವನ / ಕವಿತೆ / ಕಾಡುತ್ತವೆ ನೆನಪು

ಕಾಡುತ್ತವೆ ನೆನಪು

ಹಿತ್ತಲ ಬದಿಯಲಿ ಬೆಳೆದ ಮೂಲಿಕೆಗಳನ್ನು ಆಯ್ದು
ತಂದು ಜೀರಿಗೆ ಬೆರೆಸಿ ಕುದಿಸಿ ಇಡುತ್ತಾಳೆ ಆಕೆ
ತನ್ನ ಕಾಡಿದ ಅದೇ ಬಾಲ್ಯದ ನೋವು
ಇವರ ಕಾಡದಿರಲಿ ಎಂದು.
ಕಾಡುತ್ತವೆ ನೆನಪು

ನಿನ್ನೆ ನೆನೆಯಿಟ್ಟ ಕಾಳುಗಳು ಇಂದು
ಮೊಳಕೆಯೊಡೆದಿವೆ
ಜೋಪಾನವಾಗಿ ತೆಗೆದಿಡುವ ಕೆಲಸವಾಗಬೇಕು.
ಮೊಳಕೆ ಮುರಿಯದಂತೆ ಜಾಗೃತಿಯಲ್ಲಿ,
ದಷ್ಟಪುಷ್ಟ ಸಸಿಗಳು ಧೃಢಮೊಳಕೆಯಿಂದ
ಮಾತ್ರ ಸಾಧ್ಯ-ಎನ್ನುತ್ತಿರುತ್ತಾಳೆ.
ಅದು ಆಕೆಗೆ ಗೊತ್ತು.
ಕಾಡುತ್ತವೆ ನೆನಪು

ನೂಲಿನಂತೆ ಸೀರೆ ಆಗಬೇಕೆಂದು
ಚೆಂದದ ಗಟ್ಟಿನೂಲಲ್ಲೇ ನೇಯ್ದರೂ ಈಗೀಗ
ಸೀರೆಗಿಲ್ಲ ಅದೇ ಆಕಾರ ಬಣ್ಣ ಧಾಡಸಿತನ
ಎತ್ತೆತ್ತಿ ಒಗೆದರೂ ಹರಿಯದ ಆ ಕಾಲದ
ಸೀರೆ ಇವಲ್ಲ ಕಸಿವಿಸಿಯಾಗುತ್ತಾಳೆ ಆಕೆ
ಬರಿ ಚೆಂದ ಅಲ್ಲ ಬದುಕು ಆತ್ಮಬಲ ಬೇಕು
ಸ್ಥೈರ್ಯಕ್ಕೆ ಇಂಬು ಆಕೆ
ಕಾಡುತ್ತವೆ ನೆನಪು

ಎಂದೋ ಎಡವಿಕೊಂಡ ಕಾಲು
ನೋವು ಮರುಕಳಿಸಿ ಘಾಸಿ ಮಾಡುತ್ತವೆ.
ತಣ್ನೀರನ್ನಾದರೂ ತಣಿಸಿ ಕುಡಿಯಲು ಹೇಳು
ಹೇಳುತ್ತಾನೆ ಆಕೆಗೆ
ಕೇಳಲೆಂದೆ – ಎತ್ತರಿಸಿದ ದನಿಯಲ್ಲಿ
ಬೇಡಿದ್ದನ್ನು ಕೊಡಿಸಬೇಡ
ತಾಕೀತು ಮಾಡುತ್ತಾನೆ ಆಗಾಗ
ಚಟವಾದೀತು, ಹಟವಾದೀತು ಬಯಕೆಗಳು
ಬೆಳೆದಂತೆ – ಎನ್ನುತ್ತಾನೆ
ರಾಗಕ್ಕೆ ತೆರನಾದ ತಾಳ ಆಕೆಯದು.
ಕಾಡುತ್ತವೆ ನೆನಪು

ಬಿರುಸಾದ ಗಾಳಿಗೂ ಕೂಡ ಗಿಡಗಳು
ಬಗ್ಗಿಲ್ಲ. ಸ್ವಲ್ಪ ಸೊಟ್ಟಗಾದರೂ ಅರೆಗಳಿಗೆ
ನೆಟ್ಟಗೆ ನಿಲ್ಲುತ್ತವೆ ಮರುಗಳಿಗೆ
ಬಯಲ ಗಿಡಗಳಿಗೆ ಗಾಳಿ ಎದುರಿಸಿ ಗೊತ್ತು.
ಬೆಳೆಯಬೇಕು, ಕಲಿಯಲಿ ಇವರೂ ಅವರಂತೆ
ಎನ್ನುತ್ತಾನೆ ಆತ
ಕಾಡುತ್ತವೆ ನೆನಪು

ತೊಗಲ ಹೊದಿಕೆಯ ಹೊದಿಸಿ
ರಕ್ತಕ್ಕೆ ಕೆಂಪು ಸುರಿದವರು ಅವರು
ಕಾಡುತ್ತವೆ ನೆನಪು
ಕಾಡುತ್ತಲೇ ಇರುತ್ತವೆ ನೆನಪು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...