ಕಾಡುತ್ತವೆ ನೆನಪು

ಹಿತ್ತಲ ಬದಿಯಲಿ ಬೆಳೆದ ಮೂಲಿಕೆಗಳನ್ನು ಆಯ್ದು
ತಂದು ಜೀರಿಗೆ ಬೆರೆಸಿ ಕುದಿಸಿ ಇಡುತ್ತಾಳೆ ಆಕೆ
ತನ್ನ ಕಾಡಿದ ಅದೇ ಬಾಲ್ಯದ ನೋವು
ಇವರ ಕಾಡದಿರಲಿ ಎಂದು.
ಕಾಡುತ್ತವೆ ನೆನಪು

ನಿನ್ನೆ ನೆನೆಯಿಟ್ಟ ಕಾಳುಗಳು ಇಂದು
ಮೊಳಕೆಯೊಡೆದಿವೆ
ಜೋಪಾನವಾಗಿ ತೆಗೆದಿಡುವ ಕೆಲಸವಾಗಬೇಕು.
ಮೊಳಕೆ ಮುರಿಯದಂತೆ ಜಾಗೃತಿಯಲ್ಲಿ,
ದಷ್ಟಪುಷ್ಟ ಸಸಿಗಳು ಧೃಢಮೊಳಕೆಯಿಂದ
ಮಾತ್ರ ಸಾಧ್ಯ-ಎನ್ನುತ್ತಿರುತ್ತಾಳೆ.
ಅದು ಆಕೆಗೆ ಗೊತ್ತು.
ಕಾಡುತ್ತವೆ ನೆನಪು

ನೂಲಿನಂತೆ ಸೀರೆ ಆಗಬೇಕೆಂದು
ಚೆಂದದ ಗಟ್ಟಿನೂಲಲ್ಲೇ ನೇಯ್ದರೂ ಈಗೀಗ
ಸೀರೆಗಿಲ್ಲ ಅದೇ ಆಕಾರ ಬಣ್ಣ ಧಾಡಸಿತನ
ಎತ್ತೆತ್ತಿ ಒಗೆದರೂ ಹರಿಯದ ಆ ಕಾಲದ
ಸೀರೆ ಇವಲ್ಲ ಕಸಿವಿಸಿಯಾಗುತ್ತಾಳೆ ಆಕೆ
ಬರಿ ಚೆಂದ ಅಲ್ಲ ಬದುಕು ಆತ್ಮಬಲ ಬೇಕು
ಸ್ಥೈರ್ಯಕ್ಕೆ ಇಂಬು ಆಕೆ
ಕಾಡುತ್ತವೆ ನೆನಪು

ಎಂದೋ ಎಡವಿಕೊಂಡ ಕಾಲು
ನೋವು ಮರುಕಳಿಸಿ ಘಾಸಿ ಮಾಡುತ್ತವೆ.
ತಣ್ನೀರನ್ನಾದರೂ ತಣಿಸಿ ಕುಡಿಯಲು ಹೇಳು
ಹೇಳುತ್ತಾನೆ ಆಕೆಗೆ
ಕೇಳಲೆಂದೆ – ಎತ್ತರಿಸಿದ ದನಿಯಲ್ಲಿ
ಬೇಡಿದ್ದನ್ನು ಕೊಡಿಸಬೇಡ
ತಾಕೀತು ಮಾಡುತ್ತಾನೆ ಆಗಾಗ
ಚಟವಾದೀತು, ಹಟವಾದೀತು ಬಯಕೆಗಳು
ಬೆಳೆದಂತೆ – ಎನ್ನುತ್ತಾನೆ
ರಾಗಕ್ಕೆ ತೆರನಾದ ತಾಳ ಆಕೆಯದು.
ಕಾಡುತ್ತವೆ ನೆನಪು

ಬಿರುಸಾದ ಗಾಳಿಗೂ ಕೂಡ ಗಿಡಗಳು
ಬಗ್ಗಿಲ್ಲ. ಸ್ವಲ್ಪ ಸೊಟ್ಟಗಾದರೂ ಅರೆಗಳಿಗೆ
ನೆಟ್ಟಗೆ ನಿಲ್ಲುತ್ತವೆ ಮರುಗಳಿಗೆ
ಬಯಲ ಗಿಡಗಳಿಗೆ ಗಾಳಿ ಎದುರಿಸಿ ಗೊತ್ತು.
ಬೆಳೆಯಬೇಕು, ಕಲಿಯಲಿ ಇವರೂ ಅವರಂತೆ
ಎನ್ನುತ್ತಾನೆ ಆತ
ಕಾಡುತ್ತವೆ ನೆನಪು

ತೊಗಲ ಹೊದಿಕೆಯ ಹೊದಿಸಿ
ರಕ್ತಕ್ಕೆ ಕೆಂಪು ಸುರಿದವರು ಅವರು
ಕಾಡುತ್ತವೆ ನೆನಪು
ಕಾಡುತ್ತಲೇ ಇರುತ್ತವೆ ನೆನಪು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ ಸತ್ತ ಮನೆಯಲ್ಲಿ
Next post ತುಘ್ಲಕ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…