Home / ಕವನ / ಕವಿತೆ / ಮಗುಚಲಾಗದ ಹಾಳೆ

ಮಗುಚಲಾಗದ ಹಾಳೆ

ಭತ್ತದ ಚಿಗುರು ಚಿಮುಕಿಸಲು ಹದವಾದ ಗದ್ದೆ
ಅಲ್ಲಲ್ಲಿ ಮಣ್ಣಡಿಯ ಒಳಬಾಗಿಲ ಜಿಗಿದು
ಇಣುಕುತ್ತಿವೆ ಗದ್ದೆ ಗುಳ್ಳೆಗಳು
ಪುಟ್ಟ ಎಳೆಯ ಆಕೃತಿಯೊಂದು ಮೆಲ್ಲನೆ ಸರಿಯುತ್ತಿದೆ
ಹದುಳಿಂದ ಪಾದ ಊರುತ್ತ,
ಕಂಡ ಕಂಡ ಗುಳ್ಳೆಗಳನ್ನೆಲ್ಲಾ ಆಯುತ್ತಿದೆ ಒಂದೊಂದಾಗಿ
ತುಂತುರು ಸೋನೆ ಮಳೆಗೆ ಸ್ವಲ್ಪ ಸ್ವಲ್ಪವೇ ನಡಗುತ್ತ
ಆದರೂ ಬತ್ತದ ಉತ್ಸಾಹದಲಿ

ಆಯ್ದ ಗುಳ್ಳೆಗಳು ಈಗ ಮನೆಯ ನಡು ಅಂಗಳದಿ ಚದುರಿ ಬಿದ್ದಿವೆ-
ಮೂತಿ ಹೊರ ತೂರುವ ಗುಳ್ಳೆಗಳ ಹೊಂಚಿ ಹಿಡಿದು
ತೆಂಗಿನ ಗರಿಯ ಕಡ್ಡಿಯಿಂದ ಮೀಟಿ ಮಾಂಸವನ್ನು
ಒತ್ತಿ ತೆಗೆಯುತ್ತಿದೆ ಆಕೃತಿ,
ಕೆಲವು ಬೆರಕಿ ಗುಳ್ಳೆಗಳು ಹವಣಿಸುತ್ತಿವೆ ಜೀವ ಜೋಪಾನಕ್ಕಾಗಿ-
ವ್ಯರ್ಥವಾಗಿ -ಗೌಲಕೋಣೆಯ ಮಣ್ಣ ಮಡಿಕೆಯಲ್ಲಿ
ಕೊತ ಕೊತ ಕುದಿಯುತ್ತಿದೆ ಮಸಾಲೆ
ಗುಳ್ಳೆ ಮಾಂಸಕ್ಕೆ ಕಾಯುತ್ತ.

ನೋಡ ನೋಡುತ್ತ ಮಬ್ಬುಗತ್ತಲೆ ಅವುಚಿಕೊಳ್ಳುತ್ತಿದೆ.
ಹತ್ತಲಾಗದ ದೃಷ್ಟಿಯ ನಿಚ್ಚಳವಾಗಿಸಿ
ಗೂಡಿನತ್ತ ತೆವಳುತ್ತ ಮತ್ತೆ ಮಂದದಿಟ್ಟಿಗೆ ಬಿದ್ದ
ಹುಳವನ್ನೊಮ್ಮೆ ಕೊಕ್ಕಿನಿಂದ ಹೆಕ್ಕಿ ಕುಕ್ಕತೊಡಗಿದೆ-ಹುಂಜ
ಮತ್ತೀಗ ಅದೇ ಆಕೃತಿ
ಮರಿಕೋಳಿ ಹುಂಜಗಳ ಹಿಡಿದು ಗೂಡಿಗೆ ತಳ್ಳುತ್ತಿದೆ.
ಒತ್ತರಿಸಿ, ಜಪ್ಪರಿಸಿ ಸುರಿಯತೊಡಗಿದೆ ಮುಸಲಧಾರೆ,
ಅದಾವ ಪರಿಯ ಸೊಗಡುಗಾರನೋ ತಿಳಿಯದಾದಂತೆ,
ಥಕಥೈ ಕುಣಿತ ಅಮಲೇರಿದಂತೆ.
ಅಷ್ಟೇ ಅಲ್ಲ, ಸೇರಿಗೆ ಸವ್ವಾಸೇರು, ಜುಗಲಬಂದಿಗೆ
ಸೆಟೆದು ಬೀಸತೊಡಗಿದೆ ಗಾಳಿ, ಪರಕಾಯ ಪ್ರವೇಶ ಮಾಡಿದಂತೆ.

ಗಿಡಮರದ ಕಿವಿಯೊಳಗೆ ತೂರಿ ಕಚಗುಳಿ ಇಡುತ್ತಿದ್ದ
ತಂಬೆಲರು ಮಟಮಾಯ.
ಎಲೆಗಳು ಥರಥರನೇ ನಡಗುತ್ತಿವೆ, ಹಕ್ಕಿಗೂಡಿನ ಮರಿಗಳು
ತಾಯ್ ಪಕ್ಕೆಯಲಿ ಬಚ್ಚಿಟ್ಟುಕೊಳ್ಳುತ್ತಿವೆ,
ಮುಚ್ಚಟೆಯಾಗಿ ಸುರಿವ ಮಳೆಮಾರುತಕ್ಕೆ ಬೆದರಿ.
ಈಗ ಗಾಢಾಂಧಕಾರ ವಕ್ಕರಿಸಿದೆ,
ತಡಕಾಡುತ್ತಿವೆ ಹತ್ತಾರು ಕೈಗಳು – ದೀಪ ಬೆಳಗಲು,
ಹೊತ್ತಿಸಿದ ಮಂದ ಪ್ರಭೆಯಲ್ಲಿ ದಿಟ್ಟಿಸುತ್ತೇನೆ
-ಅದೋ, ಎಳೆಯ ಆಕೃತಿಯ ಸ್ತಬ್ಧ ಚಿತ್ರ
ಬಯಲು ಚಿತ್ರದಂತೆ-ನನ್ನದೇ ನಿಚ್ಚಳ ರೂಪ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...