ಮಗುಚಲಾಗದ ಹಾಳೆ

ಭತ್ತದ ಚಿಗುರು ಚಿಮುಕಿಸಲು ಹದವಾದ ಗದ್ದೆ
ಅಲ್ಲಲ್ಲಿ ಮಣ್ಣಡಿಯ ಒಳಬಾಗಿಲ ಜಿಗಿದು
ಇಣುಕುತ್ತಿವೆ ಗದ್ದೆ ಗುಳ್ಳೆಗಳು
ಪುಟ್ಟ ಎಳೆಯ ಆಕೃತಿಯೊಂದು ಮೆಲ್ಲನೆ ಸರಿಯುತ್ತಿದೆ
ಹದುಳಿಂದ ಪಾದ ಊರುತ್ತ,
ಕಂಡ ಕಂಡ ಗುಳ್ಳೆಗಳನ್ನೆಲ್ಲಾ ಆಯುತ್ತಿದೆ ಒಂದೊಂದಾಗಿ
ತುಂತುರು ಸೋನೆ ಮಳೆಗೆ ಸ್ವಲ್ಪ ಸ್ವಲ್ಪವೇ ನಡಗುತ್ತ
ಆದರೂ ಬತ್ತದ ಉತ್ಸಾಹದಲಿ

ಆಯ್ದ ಗುಳ್ಳೆಗಳು ಈಗ ಮನೆಯ ನಡು ಅಂಗಳದಿ ಚದುರಿ ಬಿದ್ದಿವೆ-
ಮೂತಿ ಹೊರ ತೂರುವ ಗುಳ್ಳೆಗಳ ಹೊಂಚಿ ಹಿಡಿದು
ತೆಂಗಿನ ಗರಿಯ ಕಡ್ಡಿಯಿಂದ ಮೀಟಿ ಮಾಂಸವನ್ನು
ಒತ್ತಿ ತೆಗೆಯುತ್ತಿದೆ ಆಕೃತಿ,
ಕೆಲವು ಬೆರಕಿ ಗುಳ್ಳೆಗಳು ಹವಣಿಸುತ್ತಿವೆ ಜೀವ ಜೋಪಾನಕ್ಕಾಗಿ-
ವ್ಯರ್ಥವಾಗಿ -ಗೌಲಕೋಣೆಯ ಮಣ್ಣ ಮಡಿಕೆಯಲ್ಲಿ
ಕೊತ ಕೊತ ಕುದಿಯುತ್ತಿದೆ ಮಸಾಲೆ
ಗುಳ್ಳೆ ಮಾಂಸಕ್ಕೆ ಕಾಯುತ್ತ.

ನೋಡ ನೋಡುತ್ತ ಮಬ್ಬುಗತ್ತಲೆ ಅವುಚಿಕೊಳ್ಳುತ್ತಿದೆ.
ಹತ್ತಲಾಗದ ದೃಷ್ಟಿಯ ನಿಚ್ಚಳವಾಗಿಸಿ
ಗೂಡಿನತ್ತ ತೆವಳುತ್ತ ಮತ್ತೆ ಮಂದದಿಟ್ಟಿಗೆ ಬಿದ್ದ
ಹುಳವನ್ನೊಮ್ಮೆ ಕೊಕ್ಕಿನಿಂದ ಹೆಕ್ಕಿ ಕುಕ್ಕತೊಡಗಿದೆ-ಹುಂಜ
ಮತ್ತೀಗ ಅದೇ ಆಕೃತಿ
ಮರಿಕೋಳಿ ಹುಂಜಗಳ ಹಿಡಿದು ಗೂಡಿಗೆ ತಳ್ಳುತ್ತಿದೆ.
ಒತ್ತರಿಸಿ, ಜಪ್ಪರಿಸಿ ಸುರಿಯತೊಡಗಿದೆ ಮುಸಲಧಾರೆ,
ಅದಾವ ಪರಿಯ ಸೊಗಡುಗಾರನೋ ತಿಳಿಯದಾದಂತೆ,
ಥಕಥೈ ಕುಣಿತ ಅಮಲೇರಿದಂತೆ.
ಅಷ್ಟೇ ಅಲ್ಲ, ಸೇರಿಗೆ ಸವ್ವಾಸೇರು, ಜುಗಲಬಂದಿಗೆ
ಸೆಟೆದು ಬೀಸತೊಡಗಿದೆ ಗಾಳಿ, ಪರಕಾಯ ಪ್ರವೇಶ ಮಾಡಿದಂತೆ.

ಗಿಡಮರದ ಕಿವಿಯೊಳಗೆ ತೂರಿ ಕಚಗುಳಿ ಇಡುತ್ತಿದ್ದ
ತಂಬೆಲರು ಮಟಮಾಯ.
ಎಲೆಗಳು ಥರಥರನೇ ನಡಗುತ್ತಿವೆ, ಹಕ್ಕಿಗೂಡಿನ ಮರಿಗಳು
ತಾಯ್ ಪಕ್ಕೆಯಲಿ ಬಚ್ಚಿಟ್ಟುಕೊಳ್ಳುತ್ತಿವೆ,
ಮುಚ್ಚಟೆಯಾಗಿ ಸುರಿವ ಮಳೆಮಾರುತಕ್ಕೆ ಬೆದರಿ.
ಈಗ ಗಾಢಾಂಧಕಾರ ವಕ್ಕರಿಸಿದೆ,
ತಡಕಾಡುತ್ತಿವೆ ಹತ್ತಾರು ಕೈಗಳು – ದೀಪ ಬೆಳಗಲು,
ಹೊತ್ತಿಸಿದ ಮಂದ ಪ್ರಭೆಯಲ್ಲಿ ದಿಟ್ಟಿಸುತ್ತೇನೆ
-ಅದೋ, ಎಳೆಯ ಆಕೃತಿಯ ಸ್ತಬ್ಧ ಚಿತ್ರ
ಬಯಲು ಚಿತ್ರದಂತೆ-ನನ್ನದೇ ನಿಚ್ಚಳ ರೂಪ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನಗೆ ಗೊತ್ತಿರಲಿಲ್ಲ….
Next post ಥೆಮ್ಸ್ ನದಿಯ ಮೇಲೆ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…