ಮಾಸಲು ಸೀರೆ

ವಿರಕ್ತ ಲೋಕದ ಅಸಂಬದ್ಧ ಉಲಿತ
ಉಳಿಯಿಂದ ತೂತು ಕೊರೆದಂತೆ
ಖಾಲಿಯಾದ ನೇತ್ರದ್ವಯಗಳು
ಪರಾಂಬರಿಸಿ ದೃಷ್ಟಿಯಿಟ್ಟರಷ್ಟೇ ದೃಶ್ಯ.

ಸೀಳುನೋಟ ಬೀರುತ್ತಿದ್ದಾಳೆ ಆಕೆ
ಬಾಗಿದ ಬೆನ್ನು ಸಹಕರಿಸುತ್ತಿಲ್ಲ,
ಒಮ್ಮೆಲೆ ತಡಕಾಡುತ್ತಾಳೆ,
ಜಾರಿದ ಚಾಳೀಸು ಜಾಗಕ್ಕೇರಿಸಲು:

ನಿರ್ಜೀವ ಬಿಳಿಕೂದಲುಗಳು
ಎತ್ತಿ ಕಟ್ಟಲಾಗದು
ನೆರಿಗೆಗಟ್ಟಿದ ಹಸ್ತದ ಬೆರಳುಗಳಿಗೆ:

ಮೈಗಂಟಿದ ಮಾಸಲು ಸೀರೆ
ಕೂಡ ಈಗೀಗ ಆಕೆಗೆ ಭಾರ
ಸಿಡುಕುತ್ತಾಳೆ- ಹೊರೆಗೆ
ಡೊಂಕು ಕಾಲುಗಳ ಜೋಡಿಸಲು
ಜರೂರು ಇಲ್ಲದಾಗಲು ಮತ್ತೆ
ಮಡಚುತ್ತಾಳೆ-ಮುಲುಗುತ್ತ,

ದಿಗಂತದಲ್ಲಿ ಅಸ್ತಂಗತನಾಗುತ್ತ ಭಾನು
ಭಾರವಾಗಿ ಕೊನೆಯ ಬಾಣಬಿಟ್ಟಂತೆ
ಹೊರಟು ನಿಂತಿದ್ದಾನೆ-
ಏಕಾಂಗಿತನದ ಉಯಿಲನ್ನು ಆಕೆಯ ಹೆಸರಿಗಿಟ್ಟು

ಧಗಧಗನೆ ಉರಿದು
ಬೆಳಕು ಚೆಲ್ಲಿದ ಕಾಲ
ಈಗ ಬರಿಯ ಮೆಲಕು ಮಾತ್ರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು ಸೂರ್ಯ
Next post ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…