ಕಾಂಡವಿಲ್ಲದ ಮೇಲೆ

ಅಗುಳಿ ಕಿತ್ತಿಹ ಕದಕೆ
ರಕ್ಷೆ ನೀಡುವ ಧೈರ್ಯ
ಎಲ್ಲಿಂದ ಬರಬಹುದು
ಹೇಳು ಗೆಳೆಯ,
ಕಂಡ ಕಂಡಲ್ಲೆಲ್ಲಾ ಕೊರೆದ
ಕಾಂಡವ ಕಂಡೆ, ಮತ್ತೆ ಬುಡಮೇಲು
ಮರದ ಸಹಿತ.
ಮಾರುಮಾರಿಗೂ ಮಂದಿ
ಸೇರಿಹರು ಜೋಡಿಸಲು
ಮರಮುಟ್ಟು, ಒಣಸೀಳು
ಸಿಗಬಹುದೇ, ಎಂದು
ನೀರ ಕಾಯಿಸಿ ಬಿಸಿ ನೀರ
ಮೀಯಲು ಮೈನೋವು
ತಣಿಯುವುದು ಎಂದು ತಿಳಿದು
ಗೊತ್ತಿಲ್ಲ, ನಾಳೆ ಕುಡಿಯಲು
ನೀರಿಲ್ಲ, ಒಣಭೂಮಿ,
ಬರಡು ನೆಲ ಮತ್ತೆ ಜೊತೆಗಾರ
ಸೊಳ್ಳೆ, ತಿಗಣಿ
ತರುವಾಯ ತಡಿ ಮರುಳೇ,
ಅಷ್ಟಾಂಗವಕ್ರರು ತಾಯಗರ್ಭವ
ಸೀಳಿ ತಲೆಮಾರು ತಂತುಗಳು
ಬರಬಹುದು ನಾಳೆ
ಕಾಯುತಿದೆ ಕಾರ್ಕೋಟಕ
ಮೈಯೆಲ್ಲ ಉರಿನವೆಯ
ಬೆಂಕಿ ಎದ್ದು
ಮನುಜ ಮನುಜನ
ಮುಕ್ಕಿ ಹುರಿದು ತಿಂದು
ಹರವಾದ ದಾರಿಯಲಿ
ಹದವಾದ ಹುರುಪಿನಲಿ
ಅಭಿವೃದ್ಧಿ ಹೆಸರಿನಲಿ
ನಡೆಯುತಿದೆ ನಾಶ
ಗಿಡದ ಮರವೇರಿ
ಬುಡ ಕಡಿದ ಪೆದ್ದ
ಪಡದೇ ಇರನು ವಿಷಾದ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಡುಗಿ ಮತ್ತು ದಾಸವಾಳ
Next post ಶನಿವಾರ ಸಂತೆ: ರೆಡಿಂಗ್

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys