Home / ಕವನ / ಕವಿತೆ / ಗುಪ್ತಗಾಮಿನಿ

ಗುಪ್ತಗಾಮಿನಿ

ಅಲ್ಪ ನುಡಿಯಲ್ಲಿ ತತ್ವ ವಿಚಾರ
ಪುರಾಣಗಳ ಪಠಣ, ನಿತ್ಯ ವಾಚನ
ವಾಚಾಳಿತನವಿಲ್ಲ-ವಚನ ಬಲು ಭಾರ
ಮಿತ ಭಾಷಿ ನಾನೆಂಬ
ಕೀಟಕೊರೆತ-ಮೆದುಳು ಊತ

ಎಲ್ಲ ದುರ್ಗಮ ದಾರಿ ಕ್ರಮಿಸಿ ಬಂದಿಹೆ
ಏರುವ ಮೊದಲು ಗದ್ದುಗೆ
ನನಗಾರು ಸಮನಿಲ್ಲ
ನನ್ನಿಂದಲೆ ಎಲ್ಲ ಸರ್ವಥಾ ಸಲ್ಲ
ಅಲ್ಲೂ ವಾಸನೆ

ನಾ ಸರಳ, ಸಜ್ಜನ ನೀತಿ ನೇಮಗಳ
ಪರಿಪಾಲಕ, ಸತ್ಯ ಶಾಂತಿಗಳ
ಪೂಜಕ, ಎನಗಿಂತ ಹಿರಿಯರಿಲ್ಲ
ನನ್ನಂತೆ ಯಾರಿಲ್ಲ, ಕನವರಿಕೆ
ಬೇರೆನಿಲ್ಲ, ಒಳಬೆರಗು-ಅದೇ

ಯಾವ ಧನ್ವಂತರಿಯ ಬಳಿಯಿಲ್ಲ ಮದ್ದು
ಬಿಳಿಯ ಜುಬ್ಬದ ಒಳಗೆ
ಕರಿಯ ಕೋಟಿನ ಗುಂಡಿಯಲ್ಲಿ
ರೇಷ್ಮೇ ಮಕಮಲ್ಲಿನ ನುಣುಪಲ್ಲಿ
ಸದ್ದಿಲ್ಲದೇ ಠೀಕಾಣಿ
ಜರಡಿ ಹಿಡಿದರೂ ಜಾರದಂತೆ
ಅಂಟಿಕೂತಿದೆ

ನಾನು ಹೋದರೆ ಹೋದೇನು
ಕನಕನಿಗಾದ ಉದಯಜ್ಞಾನ ನಮಗೇಕಿಲ್ಲ
ಬಿಡು ಆ ಹಂತ ಏರಿಲ್ಲ
ಆ ಮರ್ಮ ಸರಳಿಲ್ಲ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...