ಗುಪ್ತಗಾಮಿನಿ

ಅಲ್ಪ ನುಡಿಯಲ್ಲಿ ತತ್ವ ವಿಚಾರ
ಪುರಾಣಗಳ ಪಠಣ, ನಿತ್ಯ ವಾಚನ
ವಾಚಾಳಿತನವಿಲ್ಲ-ವಚನ ಬಲು ಭಾರ
ಮಿತ ಭಾಷಿ ನಾನೆಂಬ
ಕೀಟಕೊರೆತ-ಮೆದುಳು ಊತ

ಎಲ್ಲ ದುರ್ಗಮ ದಾರಿ ಕ್ರಮಿಸಿ ಬಂದಿಹೆ
ಏರುವ ಮೊದಲು ಗದ್ದುಗೆ
ನನಗಾರು ಸಮನಿಲ್ಲ
ನನ್ನಿಂದಲೆ ಎಲ್ಲ ಸರ್ವಥಾ ಸಲ್ಲ
ಅಲ್ಲೂ ವಾಸನೆ

ನಾ ಸರಳ, ಸಜ್ಜನ ನೀತಿ ನೇಮಗಳ
ಪರಿಪಾಲಕ, ಸತ್ಯ ಶಾಂತಿಗಳ
ಪೂಜಕ, ಎನಗಿಂತ ಹಿರಿಯರಿಲ್ಲ
ನನ್ನಂತೆ ಯಾರಿಲ್ಲ, ಕನವರಿಕೆ
ಬೇರೆನಿಲ್ಲ, ಒಳಬೆರಗು-ಅದೇ

ಯಾವ ಧನ್ವಂತರಿಯ ಬಳಿಯಿಲ್ಲ ಮದ್ದು
ಬಿಳಿಯ ಜುಬ್ಬದ ಒಳಗೆ
ಕರಿಯ ಕೋಟಿನ ಗುಂಡಿಯಲ್ಲಿ
ರೇಷ್ಮೇ ಮಕಮಲ್ಲಿನ ನುಣುಪಲ್ಲಿ
ಸದ್ದಿಲ್ಲದೇ ಠೀಕಾಣಿ
ಜರಡಿ ಹಿಡಿದರೂ ಜಾರದಂತೆ
ಅಂಟಿಕೂತಿದೆ

ನಾನು ಹೋದರೆ ಹೋದೇನು
ಕನಕನಿಗಾದ ಉದಯಜ್ಞಾನ ನಮಗೇಕಿಲ್ಲ
ಬಿಡು ಆ ಹಂತ ಏರಿಲ್ಲ
ಆ ಮರ್ಮ ಸರಳಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೇಮ ಮತ್ತು ದುಃಖ
Next post ಕೇವಲ ನಗೆ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys