Home / ಕವನ / ಕವಿತೆ / ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಅವಳು ಹಾಕಿದ
ಅರ್ಜಿಗಳೆಲ್ಲಾ ವಜಾಗೊಂಡಿದೆಯಂತೆ.
ವಿನಂತಿ ಪತ್ರದ ಒಕ್ಕಣಿಕೆ ಒಂದು ಚೂರು ಸರಿಯಾಗಿಲ್ಲ,
ಎಲ್ಲಿಯೂ ಒಂದನ್ನು ಕಾಳಜಿಯಿಂದ ಪೂರ್ಣಗೊಳಿಸಿಲ್ಲ,
ಚಿತ್ತುಕಾಟು, ತಿದ್ದುಪಡಿಗಳಿದ್ದರೆ ಪರಿಗಣಿಸಲಾಗುವುದಿಲ್ಲ
-ಎಂಬುದು ತಲಾಟಿಯ ತಕರಾರು.

ಪತ್ರದಲ್ಲಷ್ಟೇ ಪ್ರಮಾದಗೊಂಡಿದೆ ಎಂದರೆ
ಅದು ಸುಳ್ಳೆ ಸುಳ್ಳು:
ಯಾಕೆಂದರೆ ಬದುಕಿನ ಪಾತ್ರಗಳೆಲ್ಲ
ಅದಲು ಬದಲಾಗಿವೆ. ಪಾತ್ರದ ಚಹರೆಗಳು ಕೂಡ
ಗುರುತೆ ಸಿಗದಷ್ಟು ಮಾರ್ಪಾಟಾಗಿವೆ.
ಅದರಲ್ಲಿ ಒಂದು ಅವಳದೂ..

ಅಂದೆಲ್ಲಾ ತಂಬೆಲರಿಗೆ ತೀಡಿಕೊಂಡ
ಎಳೆತಳಿರಂತೆ- ಮೋಹಕತೆಗೆ ಮರುಳಾಗಿ,
ಪರಸ್ಪರ ಮುಟ್ಟಗೊಡದೇ, ಪರಿಪರಿಯ ಭಾವದೋಕುಳಿಯಾಗುತ್ತ
ಹೊಂಬಾಳಿನ ಹಂಬಲವ ಮೈತುಂಬಾ ಹೊದ್ದು,
ಆ ತುಡಿತದಲ್ಲೇ ತವಕಿಸುತ್ತ ಕೂಗಳತೆಗೆ ಸಿಗದವನ ದಾರಿ ಕಾಯುತ್ತ-
ಇಲ್ಲ ಮುಟ್ಟಲೇ ಇಲ್ಲ ಕೂಗು,
ಹಾಗಾಗೇ ಪಾತ್ರ ಪಲ್ಲಟ.

ಆ ಪ್ರೀತಿಯ ಬೇಲಿ ಕೂಡ ಪರಭಾರೆ ವಹಿಸಿಕೊಂಡಿದೆ.
ಯಾರದೋ ಗರ್ಭಕ್ಕೆ ವೀರ್‍ಯದಾನಿಯಾಗಿ, ಆದರ್ಶ ಪತಿಯಾಗಿ,
ಅಪ್ಪಟ ತಂದೆಯಾಗಿ,
ಹಾಗಾಗೇ ಈಗ ವಾಸ್ತವದ ನೆರಳಲ್ಲಿ
ಅರ್ಜಿಯ ಮಂಜೂರಿ ಮಾಡಿಸಿಕೊಳ್ಳುವ
ತುರಾತುರಿಯಲ್ಲಿದ್ದಾಳೆ ಆಕೆ.
ನಾಲ್ಕಾರು ಬಾರು ಅಲೆದಾಡಿ ಅವರಿವರ ಬುದ್ದಿವಾದಕ್ಕೆ ಕಿವಿಕೊಟ್ಟು
ಅಸಂಬದ್ಧವನ್ನೆಲ್ಲಾ ನಿವಾರಿಸಿ,
ತಿದ್ದುಪಡಿಗಳನ್ನೆಲ್ಲಾ ಕಾಣದಂತೆ ಬಿಳಿ ಲೇಪನ ಬಳಿದು
ಮೇಲೆ ನಾಜೂಕಾಗಿ ಹೊಸ ಅಕ್ಷರ ಮೂಡಿಸುತ್ತಿದ್ಧಾಳೆ ಆಕೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...