Home / ಕವನ / ಕವಿತೆ / ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಅವಳು ಹಾಕಿದ
ಅರ್ಜಿಗಳೆಲ್ಲಾ ವಜಾಗೊಂಡಿದೆಯಂತೆ.
ವಿನಂತಿ ಪತ್ರದ ಒಕ್ಕಣಿಕೆ ಒಂದು ಚೂರು ಸರಿಯಾಗಿಲ್ಲ,
ಎಲ್ಲಿಯೂ ಒಂದನ್ನು ಕಾಳಜಿಯಿಂದ ಪೂರ್ಣಗೊಳಿಸಿಲ್ಲ,
ಚಿತ್ತುಕಾಟು, ತಿದ್ದುಪಡಿಗಳಿದ್ದರೆ ಪರಿಗಣಿಸಲಾಗುವುದಿಲ್ಲ
-ಎಂಬುದು ತಲಾಟಿಯ ತಕರಾರು.

ಪತ್ರದಲ್ಲಷ್ಟೇ ಪ್ರಮಾದಗೊಂಡಿದೆ ಎಂದರೆ
ಅದು ಸುಳ್ಳೆ ಸುಳ್ಳು:
ಯಾಕೆಂದರೆ ಬದುಕಿನ ಪಾತ್ರಗಳೆಲ್ಲ
ಅದಲು ಬದಲಾಗಿವೆ. ಪಾತ್ರದ ಚಹರೆಗಳು ಕೂಡ
ಗುರುತೆ ಸಿಗದಷ್ಟು ಮಾರ್ಪಾಟಾಗಿವೆ.
ಅದರಲ್ಲಿ ಒಂದು ಅವಳದೂ..

ಅಂದೆಲ್ಲಾ ತಂಬೆಲರಿಗೆ ತೀಡಿಕೊಂಡ
ಎಳೆತಳಿರಂತೆ- ಮೋಹಕತೆಗೆ ಮರುಳಾಗಿ,
ಪರಸ್ಪರ ಮುಟ್ಟಗೊಡದೇ, ಪರಿಪರಿಯ ಭಾವದೋಕುಳಿಯಾಗುತ್ತ
ಹೊಂಬಾಳಿನ ಹಂಬಲವ ಮೈತುಂಬಾ ಹೊದ್ದು,
ಆ ತುಡಿತದಲ್ಲೇ ತವಕಿಸುತ್ತ ಕೂಗಳತೆಗೆ ಸಿಗದವನ ದಾರಿ ಕಾಯುತ್ತ-
ಇಲ್ಲ ಮುಟ್ಟಲೇ ಇಲ್ಲ ಕೂಗು,
ಹಾಗಾಗೇ ಪಾತ್ರ ಪಲ್ಲಟ.

ಆ ಪ್ರೀತಿಯ ಬೇಲಿ ಕೂಡ ಪರಭಾರೆ ವಹಿಸಿಕೊಂಡಿದೆ.
ಯಾರದೋ ಗರ್ಭಕ್ಕೆ ವೀರ್‍ಯದಾನಿಯಾಗಿ, ಆದರ್ಶ ಪತಿಯಾಗಿ,
ಅಪ್ಪಟ ತಂದೆಯಾಗಿ,
ಹಾಗಾಗೇ ಈಗ ವಾಸ್ತವದ ನೆರಳಲ್ಲಿ
ಅರ್ಜಿಯ ಮಂಜೂರಿ ಮಾಡಿಸಿಕೊಳ್ಳುವ
ತುರಾತುರಿಯಲ್ಲಿದ್ದಾಳೆ ಆಕೆ.
ನಾಲ್ಕಾರು ಬಾರು ಅಲೆದಾಡಿ ಅವರಿವರ ಬುದ್ದಿವಾದಕ್ಕೆ ಕಿವಿಕೊಟ್ಟು
ಅಸಂಬದ್ಧವನ್ನೆಲ್ಲಾ ನಿವಾರಿಸಿ,
ತಿದ್ದುಪಡಿಗಳನ್ನೆಲ್ಲಾ ಕಾಣದಂತೆ ಬಿಳಿ ಲೇಪನ ಬಳಿದು
ಮೇಲೆ ನಾಜೂಕಾಗಿ ಹೊಸ ಅಕ್ಷರ ಮೂಡಿಸುತ್ತಿದ್ಧಾಳೆ ಆಕೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...