Home / ಕವನ / ಕವಿತೆ / ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಹಾಕಿದ ಅರ್ಜಿ

ನೆಮ್ಮದಿಗೆ ಅವಳು ಹಾಕಿದ
ಅರ್ಜಿಗಳೆಲ್ಲಾ ವಜಾಗೊಂಡಿದೆಯಂತೆ.
ವಿನಂತಿ ಪತ್ರದ ಒಕ್ಕಣಿಕೆ ಒಂದು ಚೂರು ಸರಿಯಾಗಿಲ್ಲ,
ಎಲ್ಲಿಯೂ ಒಂದನ್ನು ಕಾಳಜಿಯಿಂದ ಪೂರ್ಣಗೊಳಿಸಿಲ್ಲ,
ಚಿತ್ತುಕಾಟು, ತಿದ್ದುಪಡಿಗಳಿದ್ದರೆ ಪರಿಗಣಿಸಲಾಗುವುದಿಲ್ಲ
-ಎಂಬುದು ತಲಾಟಿಯ ತಕರಾರು.

ಪತ್ರದಲ್ಲಷ್ಟೇ ಪ್ರಮಾದಗೊಂಡಿದೆ ಎಂದರೆ
ಅದು ಸುಳ್ಳೆ ಸುಳ್ಳು:
ಯಾಕೆಂದರೆ ಬದುಕಿನ ಪಾತ್ರಗಳೆಲ್ಲ
ಅದಲು ಬದಲಾಗಿವೆ. ಪಾತ್ರದ ಚಹರೆಗಳು ಕೂಡ
ಗುರುತೆ ಸಿಗದಷ್ಟು ಮಾರ್ಪಾಟಾಗಿವೆ.
ಅದರಲ್ಲಿ ಒಂದು ಅವಳದೂ..

ಅಂದೆಲ್ಲಾ ತಂಬೆಲರಿಗೆ ತೀಡಿಕೊಂಡ
ಎಳೆತಳಿರಂತೆ- ಮೋಹಕತೆಗೆ ಮರುಳಾಗಿ,
ಪರಸ್ಪರ ಮುಟ್ಟಗೊಡದೇ, ಪರಿಪರಿಯ ಭಾವದೋಕುಳಿಯಾಗುತ್ತ
ಹೊಂಬಾಳಿನ ಹಂಬಲವ ಮೈತುಂಬಾ ಹೊದ್ದು,
ಆ ತುಡಿತದಲ್ಲೇ ತವಕಿಸುತ್ತ ಕೂಗಳತೆಗೆ ಸಿಗದವನ ದಾರಿ ಕಾಯುತ್ತ-
ಇಲ್ಲ ಮುಟ್ಟಲೇ ಇಲ್ಲ ಕೂಗು,
ಹಾಗಾಗೇ ಪಾತ್ರ ಪಲ್ಲಟ.

ಆ ಪ್ರೀತಿಯ ಬೇಲಿ ಕೂಡ ಪರಭಾರೆ ವಹಿಸಿಕೊಂಡಿದೆ.
ಯಾರದೋ ಗರ್ಭಕ್ಕೆ ವೀರ್‍ಯದಾನಿಯಾಗಿ, ಆದರ್ಶ ಪತಿಯಾಗಿ,
ಅಪ್ಪಟ ತಂದೆಯಾಗಿ,
ಹಾಗಾಗೇ ಈಗ ವಾಸ್ತವದ ನೆರಳಲ್ಲಿ
ಅರ್ಜಿಯ ಮಂಜೂರಿ ಮಾಡಿಸಿಕೊಳ್ಳುವ
ತುರಾತುರಿಯಲ್ಲಿದ್ದಾಳೆ ಆಕೆ.
ನಾಲ್ಕಾರು ಬಾರು ಅಲೆದಾಡಿ ಅವರಿವರ ಬುದ್ದಿವಾದಕ್ಕೆ ಕಿವಿಕೊಟ್ಟು
ಅಸಂಬದ್ಧವನ್ನೆಲ್ಲಾ ನಿವಾರಿಸಿ,
ತಿದ್ದುಪಡಿಗಳನ್ನೆಲ್ಲಾ ಕಾಣದಂತೆ ಬಿಳಿ ಲೇಪನ ಬಳಿದು
ಮೇಲೆ ನಾಜೂಕಾಗಿ ಹೊಸ ಅಕ್ಷರ ಮೂಡಿಸುತ್ತಿದ್ಧಾಳೆ ಆಕೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...