Home / ಕವನ / ಕವಿತೆ / ಸ್ವಾತಂತ್ರ್ಯ- ಕನಸು ನನಸು

ಸ್ವಾತಂತ್ರ್ಯ- ಕನಸು ನನಸು

ಅವರು ಬಿಳಿ ಬಣ್ಣದ ಮಾಯಾ
ಮಂದರಿ ಹೊದ್ದು ಬಂದಿದ್ದರು
ತೆವಳುತ್ತ, ಸರ್ಪಸಂತತಿ
ಅನ್ನವಿಕ್ಕಿದ್ದಲ್ಲೇ ಕನ್ನವಿಕ್ಕುವುದು.
ಕಸಿದುಕೊಂಡರು-ಹಕ್ಕು, ಸ್ವಾತಂತ್ರ್ಯ
ದತ್ತು ಮಕ್ಕಳಿಗೆ ಹಕ್ಕಿಲ್ಲ, ಕರಾಕರಣೆ,
ಒಡೆದು ಆಳುವ ತಂತ್ರ ಕುತಂತ್ರ
ಶ್ರೇಷ್ಠ ನಾಗರಿಕತೆಯ ಬುಡದಲ್ಲಿತ್ತು
ಅಪರ ಅನಾಗರಿಕತೆ, ಮತ್ತೆ ಕೆಲವರ
ಕೈಯಲ್ಲಿತ್ತು ಧರ್ಮಗಾಥೆಯ ಹೊತ್ತಿಗೆ
ಬೆಣ್ಣೆಮಾತಿನ ಬುದ್ದಿವಂತರ ಮತ್ತೊಂದು
ಅವತಾರ – ಅವಾಂತರ ಮತಾಂತರ
ಕನಸಾಯಿತು ಸ್ವಾತಂತ್ರ್ಯ
ಹೆಣ್ಣು, ಹೊನ್ನು ಮಣ್ಣುಗಳ ಪರತಂತ್ರ
ಹುಟ್ಟದಿದ್ದರೆ ಹೇಗೆ? ಸೇಡು
ಮನೆ ಮನೆಯಂಗಳದಿ ಒಂದೇ ಕಲರವ
ಹಕ್ಕು-ಸ್ವಾತಂತ್ರ್ಯ, ಅಲ್ಲೊಬ್ಬ ಇಲ್ಲೊಬ್ಬರಲ್ಲ
ಅವರೊಳಗೆಲ್ಲಾ ಒಬ್ಬನೆ-ವೀರ
ಮುತ್ತಿದರು ಅಕ್ಷೋಹಿಣಿ, ಅಕ್ಷೋಹಿಣಿ
ಹಣಾಹಣಿಗೆ, ನೆತ್ತರುಕ್ಕಿಸಿದರು. ಗಲ್ಲು ಗೆದ್ದರು.
ಬೂಟು ಕಾಲಿಗೆ, ತುಪಾಕಿ ಪೀರಂಗಿಗೂ
ಗುಂಡುಗುಂಡಿಗೂ ಗುಂಡಿಗೆಯ ಒಡ್ಡಿದರು.
ಒಂದೇ ಮಂತ್ರಘೋಷ -ಆದ್ಯ ಕನಸು
ತರುಣ ಧಮನಿಗಳಲಿ ಉರಿವ ಶಿಖೆ
ಜಾತಿ ಮತ ಪಂಥಗಳ ನಡುವೆ ಒಂದೇ ಮರ್ಮ
ಸ್ವಾತಂತ್ರ್ಯ ನಮ್ಮ ಧರ್ಮ

ಹುತ್ತ ಬೆಳೆದಿತ್ತು ಬೃಹದಾಕಾರ
ಆದರೆ ಪಕ್ಕದಲ್ಲೊಬ್ಬ ಅರೆನಗ್ನ ಮಂತ್ರವಾದಿ
ನಿಂತಿದ್ದ ಪುಂಗಿ ಹಿಡಿದು, ಹೆಡೆ ಎತ್ತಿದ
ಸರ್ಪಗಳ ಹೆಡೆ ಮುರಿಗೆ ಕಟ್ಟಲು
ಮತ್ತೊಬ್ಬ ಬಿಲ್ಲುಗಾರ ಕೋನೆ ಕೋನೆಗೂ
ಕಣ್ಣು ಮುಚ್ಚಿ ಬಾಣ ಬಿಡತೊಡಗಿದ.
ಇರುವೆ ಕಟ್ಟಿದ ಗೂಡು
ತನ್ನದೆಂದು ಬೀಗುತ್ತಿದ್ದ ಸರ್ಪಗಳು
ಸದ್ದಿಲ್ಲದೇ ಸರಿದು ಹೋದವು
ಹುತ್ತಕ್ಕೆ ಬೆಂಕಿ ಬೀಳತೊಡಗಲು
ನನಸಾಯಿತು ಸ್ವಾತಂತ್ರ್ಯ
ಭಾರತೀಯರ ಎದೆಗೂಡ ಕಹಳೆಯಲ್ಲೀಗ
ಜೈಹಿಂದ ಒಂದೇ ಮಂತ್ರ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...