Home / ಕವನ / ಕವಿತೆ / ಸ್ವಾತಂತ್ರ್ಯ- ಕನಸು ನನಸು

ಸ್ವಾತಂತ್ರ್ಯ- ಕನಸು ನನಸು

ಅವರು ಬಿಳಿ ಬಣ್ಣದ ಮಾಯಾ
ಮಂದರಿ ಹೊದ್ದು ಬಂದಿದ್ದರು
ತೆವಳುತ್ತ, ಸರ್ಪಸಂತತಿ
ಅನ್ನವಿಕ್ಕಿದ್ದಲ್ಲೇ ಕನ್ನವಿಕ್ಕುವುದು.
ಕಸಿದುಕೊಂಡರು-ಹಕ್ಕು, ಸ್ವಾತಂತ್ರ್ಯ
ದತ್ತು ಮಕ್ಕಳಿಗೆ ಹಕ್ಕಿಲ್ಲ, ಕರಾಕರಣೆ,
ಒಡೆದು ಆಳುವ ತಂತ್ರ ಕುತಂತ್ರ
ಶ್ರೇಷ್ಠ ನಾಗರಿಕತೆಯ ಬುಡದಲ್ಲಿತ್ತು
ಅಪರ ಅನಾಗರಿಕತೆ, ಮತ್ತೆ ಕೆಲವರ
ಕೈಯಲ್ಲಿತ್ತು ಧರ್ಮಗಾಥೆಯ ಹೊತ್ತಿಗೆ
ಬೆಣ್ಣೆಮಾತಿನ ಬುದ್ದಿವಂತರ ಮತ್ತೊಂದು
ಅವತಾರ – ಅವಾಂತರ ಮತಾಂತರ
ಕನಸಾಯಿತು ಸ್ವಾತಂತ್ರ್ಯ
ಹೆಣ್ಣು, ಹೊನ್ನು ಮಣ್ಣುಗಳ ಪರತಂತ್ರ
ಹುಟ್ಟದಿದ್ದರೆ ಹೇಗೆ? ಸೇಡು
ಮನೆ ಮನೆಯಂಗಳದಿ ಒಂದೇ ಕಲರವ
ಹಕ್ಕು-ಸ್ವಾತಂತ್ರ್ಯ, ಅಲ್ಲೊಬ್ಬ ಇಲ್ಲೊಬ್ಬರಲ್ಲ
ಅವರೊಳಗೆಲ್ಲಾ ಒಬ್ಬನೆ-ವೀರ
ಮುತ್ತಿದರು ಅಕ್ಷೋಹಿಣಿ, ಅಕ್ಷೋಹಿಣಿ
ಹಣಾಹಣಿಗೆ, ನೆತ್ತರುಕ್ಕಿಸಿದರು. ಗಲ್ಲು ಗೆದ್ದರು.
ಬೂಟು ಕಾಲಿಗೆ, ತುಪಾಕಿ ಪೀರಂಗಿಗೂ
ಗುಂಡುಗುಂಡಿಗೂ ಗುಂಡಿಗೆಯ ಒಡ್ಡಿದರು.
ಒಂದೇ ಮಂತ್ರಘೋಷ -ಆದ್ಯ ಕನಸು
ತರುಣ ಧಮನಿಗಳಲಿ ಉರಿವ ಶಿಖೆ
ಜಾತಿ ಮತ ಪಂಥಗಳ ನಡುವೆ ಒಂದೇ ಮರ್ಮ
ಸ್ವಾತಂತ್ರ್ಯ ನಮ್ಮ ಧರ್ಮ

ಹುತ್ತ ಬೆಳೆದಿತ್ತು ಬೃಹದಾಕಾರ
ಆದರೆ ಪಕ್ಕದಲ್ಲೊಬ್ಬ ಅರೆನಗ್ನ ಮಂತ್ರವಾದಿ
ನಿಂತಿದ್ದ ಪುಂಗಿ ಹಿಡಿದು, ಹೆಡೆ ಎತ್ತಿದ
ಸರ್ಪಗಳ ಹೆಡೆ ಮುರಿಗೆ ಕಟ್ಟಲು
ಮತ್ತೊಬ್ಬ ಬಿಲ್ಲುಗಾರ ಕೋನೆ ಕೋನೆಗೂ
ಕಣ್ಣು ಮುಚ್ಚಿ ಬಾಣ ಬಿಡತೊಡಗಿದ.
ಇರುವೆ ಕಟ್ಟಿದ ಗೂಡು
ತನ್ನದೆಂದು ಬೀಗುತ್ತಿದ್ದ ಸರ್ಪಗಳು
ಸದ್ದಿಲ್ಲದೇ ಸರಿದು ಹೋದವು
ಹುತ್ತಕ್ಕೆ ಬೆಂಕಿ ಬೀಳತೊಡಗಲು
ನನಸಾಯಿತು ಸ್ವಾತಂತ್ರ್ಯ
ಭಾರತೀಯರ ಎದೆಗೂಡ ಕಹಳೆಯಲ್ಲೀಗ
ಜೈಹಿಂದ ಒಂದೇ ಮಂತ್ರ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...