Home / ಕವನ / ಕವಿತೆ / ಸ್ವಾತಂತ್ರ್ಯ- ಕನಸು ನನಸು

ಸ್ವಾತಂತ್ರ್ಯ- ಕನಸು ನನಸು

ಅವರು ಬಿಳಿ ಬಣ್ಣದ ಮಾಯಾ
ಮಂದರಿ ಹೊದ್ದು ಬಂದಿದ್ದರು
ತೆವಳುತ್ತ, ಸರ್ಪಸಂತತಿ
ಅನ್ನವಿಕ್ಕಿದ್ದಲ್ಲೇ ಕನ್ನವಿಕ್ಕುವುದು.
ಕಸಿದುಕೊಂಡರು-ಹಕ್ಕು, ಸ್ವಾತಂತ್ರ್ಯ
ದತ್ತು ಮಕ್ಕಳಿಗೆ ಹಕ್ಕಿಲ್ಲ, ಕರಾಕರಣೆ,
ಒಡೆದು ಆಳುವ ತಂತ್ರ ಕುತಂತ್ರ
ಶ್ರೇಷ್ಠ ನಾಗರಿಕತೆಯ ಬುಡದಲ್ಲಿತ್ತು
ಅಪರ ಅನಾಗರಿಕತೆ, ಮತ್ತೆ ಕೆಲವರ
ಕೈಯಲ್ಲಿತ್ತು ಧರ್ಮಗಾಥೆಯ ಹೊತ್ತಿಗೆ
ಬೆಣ್ಣೆಮಾತಿನ ಬುದ್ದಿವಂತರ ಮತ್ತೊಂದು
ಅವತಾರ – ಅವಾಂತರ ಮತಾಂತರ
ಕನಸಾಯಿತು ಸ್ವಾತಂತ್ರ್ಯ
ಹೆಣ್ಣು, ಹೊನ್ನು ಮಣ್ಣುಗಳ ಪರತಂತ್ರ
ಹುಟ್ಟದಿದ್ದರೆ ಹೇಗೆ? ಸೇಡು
ಮನೆ ಮನೆಯಂಗಳದಿ ಒಂದೇ ಕಲರವ
ಹಕ್ಕು-ಸ್ವಾತಂತ್ರ್ಯ, ಅಲ್ಲೊಬ್ಬ ಇಲ್ಲೊಬ್ಬರಲ್ಲ
ಅವರೊಳಗೆಲ್ಲಾ ಒಬ್ಬನೆ-ವೀರ
ಮುತ್ತಿದರು ಅಕ್ಷೋಹಿಣಿ, ಅಕ್ಷೋಹಿಣಿ
ಹಣಾಹಣಿಗೆ, ನೆತ್ತರುಕ್ಕಿಸಿದರು. ಗಲ್ಲು ಗೆದ್ದರು.
ಬೂಟು ಕಾಲಿಗೆ, ತುಪಾಕಿ ಪೀರಂಗಿಗೂ
ಗುಂಡುಗುಂಡಿಗೂ ಗುಂಡಿಗೆಯ ಒಡ್ಡಿದರು.
ಒಂದೇ ಮಂತ್ರಘೋಷ -ಆದ್ಯ ಕನಸು
ತರುಣ ಧಮನಿಗಳಲಿ ಉರಿವ ಶಿಖೆ
ಜಾತಿ ಮತ ಪಂಥಗಳ ನಡುವೆ ಒಂದೇ ಮರ್ಮ
ಸ್ವಾತಂತ್ರ್ಯ ನಮ್ಮ ಧರ್ಮ

ಹುತ್ತ ಬೆಳೆದಿತ್ತು ಬೃಹದಾಕಾರ
ಆದರೆ ಪಕ್ಕದಲ್ಲೊಬ್ಬ ಅರೆನಗ್ನ ಮಂತ್ರವಾದಿ
ನಿಂತಿದ್ದ ಪುಂಗಿ ಹಿಡಿದು, ಹೆಡೆ ಎತ್ತಿದ
ಸರ್ಪಗಳ ಹೆಡೆ ಮುರಿಗೆ ಕಟ್ಟಲು
ಮತ್ತೊಬ್ಬ ಬಿಲ್ಲುಗಾರ ಕೋನೆ ಕೋನೆಗೂ
ಕಣ್ಣು ಮುಚ್ಚಿ ಬಾಣ ಬಿಡತೊಡಗಿದ.
ಇರುವೆ ಕಟ್ಟಿದ ಗೂಡು
ತನ್ನದೆಂದು ಬೀಗುತ್ತಿದ್ದ ಸರ್ಪಗಳು
ಸದ್ದಿಲ್ಲದೇ ಸರಿದು ಹೋದವು
ಹುತ್ತಕ್ಕೆ ಬೆಂಕಿ ಬೀಳತೊಡಗಲು
ನನಸಾಯಿತು ಸ್ವಾತಂತ್ರ್ಯ
ಭಾರತೀಯರ ಎದೆಗೂಡ ಕಹಳೆಯಲ್ಲೀಗ
ಜೈಹಿಂದ ಒಂದೇ ಮಂತ್ರ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...