ಸ್ವಾತಂತ್ರ್ಯ- ಕನಸು ನನಸು

ಅವರು ಬಿಳಿ ಬಣ್ಣದ ಮಾಯಾ
ಮಂದರಿ ಹೊದ್ದು ಬಂದಿದ್ದರು
ತೆವಳುತ್ತ, ಸರ್ಪಸಂತತಿ
ಅನ್ನವಿಕ್ಕಿದ್ದಲ್ಲೇ ಕನ್ನವಿಕ್ಕುವುದು.
ಕಸಿದುಕೊಂಡರು-ಹಕ್ಕು, ಸ್ವಾತಂತ್ರ್ಯ
ದತ್ತು ಮಕ್ಕಳಿಗೆ ಹಕ್ಕಿಲ್ಲ, ಕರಾಕರಣೆ,
ಒಡೆದು ಆಳುವ ತಂತ್ರ ಕುತಂತ್ರ
ಶ್ರೇಷ್ಠ ನಾಗರಿಕತೆಯ ಬುಡದಲ್ಲಿತ್ತು
ಅಪರ ಅನಾಗರಿಕತೆ, ಮತ್ತೆ ಕೆಲವರ
ಕೈಯಲ್ಲಿತ್ತು ಧರ್ಮಗಾಥೆಯ ಹೊತ್ತಿಗೆ
ಬೆಣ್ಣೆಮಾತಿನ ಬುದ್ದಿವಂತರ ಮತ್ತೊಂದು
ಅವತಾರ – ಅವಾಂತರ ಮತಾಂತರ
ಕನಸಾಯಿತು ಸ್ವಾತಂತ್ರ್ಯ
ಹೆಣ್ಣು, ಹೊನ್ನು ಮಣ್ಣುಗಳ ಪರತಂತ್ರ
ಹುಟ್ಟದಿದ್ದರೆ ಹೇಗೆ? ಸೇಡು
ಮನೆ ಮನೆಯಂಗಳದಿ ಒಂದೇ ಕಲರವ
ಹಕ್ಕು-ಸ್ವಾತಂತ್ರ್ಯ, ಅಲ್ಲೊಬ್ಬ ಇಲ್ಲೊಬ್ಬರಲ್ಲ
ಅವರೊಳಗೆಲ್ಲಾ ಒಬ್ಬನೆ-ವೀರ
ಮುತ್ತಿದರು ಅಕ್ಷೋಹಿಣಿ, ಅಕ್ಷೋಹಿಣಿ
ಹಣಾಹಣಿಗೆ, ನೆತ್ತರುಕ್ಕಿಸಿದರು. ಗಲ್ಲು ಗೆದ್ದರು.
ಬೂಟು ಕಾಲಿಗೆ, ತುಪಾಕಿ ಪೀರಂಗಿಗೂ
ಗುಂಡುಗುಂಡಿಗೂ ಗುಂಡಿಗೆಯ ಒಡ್ಡಿದರು.
ಒಂದೇ ಮಂತ್ರಘೋಷ -ಆದ್ಯ ಕನಸು
ತರುಣ ಧಮನಿಗಳಲಿ ಉರಿವ ಶಿಖೆ
ಜಾತಿ ಮತ ಪಂಥಗಳ ನಡುವೆ ಒಂದೇ ಮರ್ಮ
ಸ್ವಾತಂತ್ರ್ಯ ನಮ್ಮ ಧರ್ಮ

ಹುತ್ತ ಬೆಳೆದಿತ್ತು ಬೃಹದಾಕಾರ
ಆದರೆ ಪಕ್ಕದಲ್ಲೊಬ್ಬ ಅರೆನಗ್ನ ಮಂತ್ರವಾದಿ
ನಿಂತಿದ್ದ ಪುಂಗಿ ಹಿಡಿದು, ಹೆಡೆ ಎತ್ತಿದ
ಸರ್ಪಗಳ ಹೆಡೆ ಮುರಿಗೆ ಕಟ್ಟಲು
ಮತ್ತೊಬ್ಬ ಬಿಲ್ಲುಗಾರ ಕೋನೆ ಕೋನೆಗೂ
ಕಣ್ಣು ಮುಚ್ಚಿ ಬಾಣ ಬಿಡತೊಡಗಿದ.
ಇರುವೆ ಕಟ್ಟಿದ ಗೂಡು
ತನ್ನದೆಂದು ಬೀಗುತ್ತಿದ್ದ ಸರ್ಪಗಳು
ಸದ್ದಿಲ್ಲದೇ ಸರಿದು ಹೋದವು
ಹುತ್ತಕ್ಕೆ ಬೆಂಕಿ ಬೀಳತೊಡಗಲು
ನನಸಾಯಿತು ಸ್ವಾತಂತ್ರ್ಯ
ಭಾರತೀಯರ ಎದೆಗೂಡ ಕಹಳೆಯಲ್ಲೀಗ
ಜೈಹಿಂದ ಒಂದೇ ಮಂತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೃತ್ಯು
Next post ಹೃಷೀಕೇಶಕ್ಕೆ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys