Home / ಕವನ / ಕವಿತೆ / ಕಾಳಿ

ಕಾಳಿ

ನಿತ್ಯ ಜುಳುಜುಳು ಝೇಂಕಾರ
ಆಡೊಂಬಲ ನಿನಗೀ ನೆಲ ಓಂಕಾರ
ಕೃಷ್ಣವರ್ಣ ಜಲಕನ್ಯೆಯ ವೈಯಾರ
ಕಾಳಿ ನಿನಗಿದೋ ಅನ್ವರ್ಥ ಶೃಂಗಾರ
ಸವಾಲು ಸಾಸಿರ ಎದುರಿಸಿ ಕರುಣೆ
ಹೊನ್ನ ಬದುಕಿಗೆ ದಾನದ ಸ್ಫುರಣೆ
ನಮ್ಮಯ ಮನದಲಿ ನಿನ್ನದೇ ಸ್ಮರಣೆ
ಕಾಳಿ ಜಪವಿದೋ ಮರೆಸಿತು ಬವಣೆ.

ಹುಟ್ಟನು ಕಂಡಳು ಜೋಯಿಡಾ ರಾಜ್ಯದಿ
ಡಿಗ್ಗಿಯ ಬುಡದಲಿ ಢಮರುಗೈದಳು
ಮಿಲನ ಉಂಡಳು ಕಾರವಾರದ ಕಡಲರಾಜನ
ತೋಳಸೆರೆಯಲಿ ವೀಣೆಯಾದಳು.

ಪಾಂಡರಿ, ನಾಗಿ, ನಾಶಿ, ಕಾನೇರಿ
ನದಿಗಳ ಸಂಗಮ ಸಾಲೆ
ಕುಣಿದು, ಕುಣಿಸಿ, ಕೊಳಲಗೈದಳು
ಬೆಳಕಿನ ಪುಂಜವ ಬೆಳಗಿದ ಬಾಲೆ
ಸುಪಾ, ನಾಗಝರಿ, ಕೊಡಸಳ್ಳಿ ಆಣೆಕಟ್ಟಿಗೆ ಶಾಲೆ
ಒಡಲೊಳು ತುಂಬಿವೆ ಮುಕುಟ ಮಣಿಗಳು
ನೀನೆಂದೂ ಬತ್ತದ ಮಾಲೆ

ಮಲೆಯ ಬನ ಬೆರಗು ನಿನ್ನಯ ಹೆದ್ದಾರಿ
ಇಂಚೂ ಇಂಚಿಗೂ ಸಂಚಿನ ಚಲನೆ ನಿನ್ನಯ ಮಾದರಿ
ಖಗಗಾನ ಮೀಟಿ ಮತಿಯಲಿ ನಿನ್ನದೆ ಶ್ರೀಕಾರ
ಹೆಮ್ಮೆಯ ಹೆಣ್ಣಿಗೆ ನಮ್ಮನೆ ಕಣ್ಣಿಗೆ ಹಾಕಿರಿ ಜಯಕಾರ
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...