ಅರಿವಿನ ವಾಟೆ

ಬದುಕು ಬಂಡಿಹಬ್ಬ
ಹಂಗಿಸುವವ ಕೊರಡುರಾಶಿಗಳ ದಿಬ್ಬ

ಕಾಮ, ಕ್ರೋಧ, ಲೋಭ ಮೋಹ
ಮದ, ಮತ್ಸರಗಳು ಅರಿಗಳಲ್ಲ
ಅರಿತುಕೊಳ್ಳಲು ಆಯುಧಗಳು.
ನಿಮ್ಮ ಆತ್ಮಗಮನಕ್ಕೆ ಬದುಕಿಗೆ
ಕಾಮನೆಗಳಿಲ್ಲದಿರೆ ಕಾಡು ಈ ಮನೆ
ಕಾಮವೆಂದರೆ ವೃಷ್ಟಿ
ಸಂಕುಲ ಜೀವ ಸೃಷ್ಟಿ
ಮೋಹವೆಂಬುದು ಮಧುರ
ಬೇಡವೆಂದವ ಮರುಳ
ಕ್ರೋಧಕ್ಕೆ ಕೆಂಗಣ್ಣು ಯಾಕೆ?
ಬಿಸಿಗೆ ತಾನೆ ಕರಗುವುದು ತುಪ್ಪ.
ಲೋಭ ಲಾಭಬಲ
ಇರಲೇಳು ಬದುಕು ಅರ್ಥಬಲ ಸಬಲ
ಮದವಿದ್ದರೆ ಮೆರಗು
ಅದಕೆ ಬೇಡ ಮಂಥನ ಚಿಂತನ
ಒಣ ಹರಟೆ ಒಗರು.
ಮತ್ಸರವ ಮರೆಯದೆ
ಸವಿದು ನೋಡ ಮಿತಿಯಲಿ
ಷಡ್ವರ್ಗಗಳ ಸಹಜತೆಯ ಅಂಕೆಯಲಿ
ಬದುಕು ಅಮೃತದ ವಾಟೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಳೆದು ತಾ ನನ್ನನ್ನು
Next post ವ್ಯಸನಕೋಣೆ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys