ಜನರ ಬಾಯಿ

ಅವಳು ಯೌವ್ವನದಲ್ಲಿ ವಿಧವೆಯಾದವಳು. ನೃತ್ಯ ಅವಳ ವೃತ್ತಿಯಾಗಿತ್ತು. ಅವಳು ವೇದಿಕೆಯಲ್ಲಿ ರಾಧೆಯಾಗಿ, ಕೃಷ್ಣನೊಡನೆ ಶೃಂಗಾರ ರಸದಲ್ಲಿ ಲೀನವಾಗುತಿದ್ದಳು. ಶಕುಂತಲೆಯಾಗಿ ಪ್ರೇಮ ಪಾಶದಲ್ಲಿ ಸಿಲುಕುತ್ತಿದ್ದಳು.

ರಾಮಾಯಣದಲ್ಲಿ, ಸೀತೆಯಾಗಿ ರಾಮಪಟ್ಟಾಭಿಷೇಕದಲ್ಲಿ ಮೆರೆಯುತ್ತಿದ್ದಳು. ಜನರು ಆಡಿಕೊಂಡಿದ್ದು “ಹೀಗೆ ಅವಳು ಬಾಳಲ್ಲಿ ಕಳೆದುಕೊಂಡದ್ದನ್ನು ವೇದಿಕೆಯಲ್ಲಿ ಹುಡುಕುತ್ತಿದ್ದಾಳೆ.”

ಇನ್ನು ಕೆಲವರು ಅಂದದ್ದು “ಇವಳು ವಿಧವೆಯಾಗಿ ಮಾಡಬಾರದ್ದೆಲ್ಲಾ ಮಾಡುತ್ತಿದ್ದಾಳೆ. ಕಾಲ ಕೆಟ್ಟುಹೋಯಿತು ಎಂದು”.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೂಹು
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೪೮

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…