ಬೆಳ್ಳಿ ಹಾಡಿತು

ಬೆಳಕು ಚಿಮ್ಮಿತು ಬೆಳ್ಳಿ ಹಾಡಿತು.
ದಿವ್ಯ ಬಾಗಿಲು ತೆರೆಯಿತು ||

ಎಡದ ಕಡಲಿನ ನಿಬಿಡ ಒಡಲಲಿ
ಜ್ಯೋತಿ ತೆಪ್ಪವು ತೇಲಿತು
ತೆರೆಯ ಹೊರೆಯಲಿ ನೊರೆಯ ನೆಲೆಯಲಿ
ಆತ್ಮದೀಪವ ತೂರಿತು

ಮುಗಿಲ ಬಾಂಡಿಯ ಕರಿಯ ಕಂಠವ
ಮಿಂಚು ಕಿರಣದಿ ತೊಳೆಯಿತು
ದೂರ ದಂಡೆಯ ಕರಿಯ ಅಂಚಿಗೆ
ಆಗ್ನಿ ತೇರನು ಎಳೆಯಿತು

ಎಲುಬು ಗೂಡಿನ ಶವದ ಹುಡಿಯಲಿ
ಶಿವನ ಕೆಂಡವ ತುಂಬಿತು
ಕಲ್ಲು ನಗಿಸಿತು ಮಣ್ಣು ಕುಣಿಸಿತು
ಆತ್ಮ ಕೇಕೆಯ ಹಾಕಿತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮತ್ಸರ
Next post ಸಾವಸುದ್ದಿ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys