ಚಲ್ಲಿ ಬಾ ಶಾಸ್ತ್ರಗಳ ಚಲ್ಲಿ ಬಾ ಶಸ್ತ್ರಗಳ

ನಾಲ್ಕು ವರುಷಗಳ ಶಾಸ್ತ್ರ ಪಂಡಿತ ಶಾಸ್ತ್ರಿ
ಮೂರು ನಿಮಿಷದ ಶೂನ್ಯ ನೀ ಬಲ್ಲೆಯಾ
ಅದ್ವೈತ ತರ್ಕದಲಿ ಗಣಿತಜ್ಞ ನೀನಾಗಿ.
ನಿಶ್ಯಬ್ದದಲಿನಿಂದು ನಗಬಲ್ಲೆಯಾ

ಶೂನ್ಯ ಹೇಳಲು ಹೋಗಿ ಸೊನ್ನೆ ಯಾದೆಯ ಜಾಣ
ಕಾಜಾಣ ಕೋಗಿಲೆಯ ಮಾಜಾಣರು
ನಿನ್ನ ಕಣಜದ ಒಳಗೆ ಹಣಜಲಿಯ ಒಟ್ಟುತ್ತ
ರತ್ನದೀಪ್ತಿಯ ಲಾಭ ನೀ ಮರತೆಯ

ನಾನು ಸುಂದರ ಆತ್ಮಶಿವನ ಬಂಧುರ ಪದ್ಮ
ಓ ಅವನೆ ತಾಯ್ತಂದಿ ಬಂಧುಬಳಗ
ಈ ಪ್ರೀತಿ ಮೌನಕ್ಕೆ ಈ ಪ್ರೇಮದೂಟಕ್ಕೆ
ಅದ್ವೈತವಿವೇಕ ಯಾಕೆ ಬೇಕು

ನಾನೆ ಬ್ರಹ್ಮನನು ಎಂದು ಬ್ರಹ್ಮನನ್ನು ಕೊಂದವನೆ
ಮರಳಿ ಬಾ ಈ ಪ್ರೀತಿ ಕಾರಂಜಿಗೆ
ಸರ್ವಾತ್ಮ ಶಿವನೆಂದು ಉಬ್ಬುಬ್ಬಿ ಉಲಿದವನೆ
ಬಾಲಲೀಲಾಯೋಗಿಯಾಗು ಇಳೆಗೆ

ಹೂವಾಗು ಹಣ್ಣಾಗು ಹೊಳೆಯಾಗು ಬೆಳಗಾಗು
ಆತ್ಮಸಂಪುಟವೊಡೆದು ಕಮಲವಾಗು
ಚಲ್ಲಿ ಬಾ ಶಾಸ್ತ್ರಗಳ ಚಲ್ಲಿ ಬಾ ಶಸ್ತ್ರಗಳ
ಇಲ್ಲಿಬಾ ಗರಿಬಿಚ್ಚಿ ಹಂಸೆಯಾಗು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾಳ
Next post ವಿನಯ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…