ಬರಲಿಲ್ಲ ನನ್ನವ

ಬರಲಿಲ್ಲ ನನ್ನವ
ಬರಲಿಲ್ಲ ಏಕವ್ವ
ಬರದೇ ಕಾಡುವನೇಕೆ
ಬರಿದಾಗಿದೆ ಎನ್ನ ಮನವು
ಅರಿಯನೇಕೆ ಅವ ||

ಸೊಬಗಿಲ್ಲ ಗೆಲುವಿಲ್ಲ
ಒಲವಿಲ್ಲ ನೆಲವಿಲ್ಲ
ಕಣ್ತುಂಬಿ ನಿಂದು
ಸೆರೆಯಾಗಿದೆ ಮನ
ಕಾಣದಿಹನೇಕೆ ಅವ ||

ಕನಸಲ್ಲಿ ನನಸಲ್ಲಿ
ವಿರಹದಾ ನೋವಲ್ಲಿ
ಸರಸ ಸಲ್ಲಾಪದಲ್ಲಿ
ನೂರೆಂಟು ಬಯಕೆಗಳ ತುಂಬಿ
ಬಾರದಿಹನೇಕೆ ಅವ ||

ಆಷಾಡ ಮಾಸದಾಗ
ಇಂಪಾದ ಗಾನದಾಗ
ಬರೆದಾಗ ಕವಿತೆಯ
ಅನುರಾಗದಿ ಕೂಡಿ ನಲಿದಾಡೆ
ಬಾರದಿಹನೇಕೆ ಅವ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಾಕಲೇಟ್
Next post ಲೆಕ್ಕ ಹಾಕಿಲ್ಲ ಎಷ್ಟು?

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys