ನೀನೆ ಅನಾದಿ ನಾನೇನು ಬೇಡಲಿ ಶಂಭೋಲಿಂಗಾ

ನೀನೆ ಅನಾದಿ ನಾನೇನು ಬೇಡಲಿ ಶಂಭೋಲಿಂಗಾ
ಮಾನವ ಜನ್ಮಕೆ ಬಂದು ಏನೇನು ತಿಳಿಯಲಿಲ್ಲೋ ಶಂಭೋಲಿಂಗಾ ||ಪ||

ಹಾವು ಹರಿದಾಡಿತು ಚೇಳು ಕುಣಿದಾಡಿತು ಶಂಭೋಲಿಂಗಾ
ಹಾವು ಚೇಳಿನ ನುಂಗಿ ಕೋಳಿ ಕೂಗುವದು ಶಂಭೋಲಿಂಗಾ ||೧||

ಪಕ್ಕವಿಲ್ಲದ ಪಕ್ಷಿಗಗನದೊಳಾಡಿತು ಶಂಭೋಲಿಂಗಾ
ಅಕ್ಕರದಲಿ ಶಿವಾ ನೋಡಿತಾ ನಗುತಿಹನು ಶಂಭೋಲಿಂಗಾ ||೨||

ಮಾಯವೆಂಬುದು ಮನಿಮಾಡಿತು ದೇಹದೊಳು ಶಂಭೋಲಿಂಗಾ
ಆವ ಕಾಲಕೆ ಇದು ಪರಿಹಾರವಾಗುವದು ಶಂಭೋಲಿಂಗಾ ||೩||

ಹರಸಿ ದೇವತೆಗಳಿಗೆ ಬ್ರಹ್ಮನ ಕಾವಲ ಶಂಭೋಲಿಂಗಾ
ಗುರುಮಂತ್ರ ಬಲದಿಂದ ಈ ಭವ ನೀಗುವದು ಶಂಭೋಲಿಂಗಾ ||೪||

ಕಲ್ಲುದೇವರು ಕಣ್ಣು ಮುಚ್ಚಿ ಕಾಪಾಡಿದವು ಶಂಭೋಲಿಂಗಾ
ಬಲ್ಲಿದ ಶಿಶುನಾಶಧೀಶನ ದಯದಿಂದ ಶಂಭೋಲಿಂಗಾ ||೫||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಮ್ ತೋ ದೇಖಾ ಮೊಹಮ್ಮದ
Next post ಪಾಪ ರಹಿತ ಪರಮಾತ್ಮ ಸರ್ವೋತ್ತಮ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…