Home / ಕವನ / ಕವಿತೆ / ಅವರು ತಾಯಂದಿರು

ಅವರು ತಾಯಂದಿರು

ಅವರು ತಾಯಂದಿರು ಮತ್ತೆ
ಕತ್ತಲ ರಾತ್ರಿಯ ಬಿಕ್ಕುಗಳ
ನಕ್ಷತ್ರಗಳ ತಂಪು ಆಗಸಕೆ ಒಡ್ಡಿ
ಒಡಲ ಸೆರಗತುಂಬ ಬೆಳದಿಂಗಳು
ತುಂಬಿಕೊಂಡವರು.

ಹಾರುವ ಹಕ್ಕಿ ತೇಲುವ ಮೋಡಗಳು
ಎಳೆಯುವ ತೇರಿನ ನಕ್ಷೆಗಳ
ಕಸೂತಿ ಅರಳಿಸಿಕೊಂಡು ಮತ್ತೆ
ಅಂಗಳದ ತುಂಬ ಸಡಗರದ
ದೀಪಾವಳಿ ದೀಪಗಳ ಹಚ್ಚಿದವರು.

ಹರಿಯುವ ನದಿಯ ನೀರು.
ಥಳಥಳ ಹೊಳೆಯುವ ಕೊಡಪಾನ
ಗಳಲಿ ತುಂಬಿ ಹೊಗೆ ಹಾರುವ
ಒಲೆಯ ಮೇಲೆ ಕಾಯಿಸಿ ಎಣ್ಣೇಹಚ್ಚಿ
ಬಿಸಿನೀರು ಅಭ್ಯಂಜನ ಸ್ನಾನ ಪುಳಕ ಹುಟ್ಟಿಸಿದವರು.

ಎಲ್ಲಾ ದಾರಿಗಳ ಕಲ್ಲು ಕಣಿವೆಯ
ದಾಟಿಸಿ ಕೈ ಹಿಡಿದು ಹಾಲು ಕುಡಿಸಿ
ಮೆಲ್ಲಗೆ ಬಯಲ ಹಸಿರು ನದಿಗುಡ್ಡ
ಹಸಿರ ಹೊಳಪಿಗೆ ಬಿಸಿಲಿಗೊಡ್ಡಿ ತಂದು
ಗುಬ್ಬಚ್ಚಿ ಗೂಡು ಕಟ್ಟಿಸಿದವರು.

ಬಿರುಬಿಸಿಲ ಕೆಂಡದಲಿ ಬೇಯುವಾಗ
ಅದೃಷ್ಟದ ಮಳೆ ಮೋಡ ಹರಿಸಿದ ಪ್ರೀತಿ
ಭೋರೆಂದು ಸುರಿದ ಮಳೆಯಲಿ
ತಬ್ಬಿ ಅಂಗಳದ ಮಲ್ಲಿಗೆ ಮುಡಿಗೇರಿಸಿ –
ಬಯಲಗಾಳಿಯಲಿ ಹೂವಹಕ್ಕಿ ಹಾಡು ಕೇಳಿಸಿದವರು.

ಜಾತ್ರೆಯಲಿ ಬಣ್ಣದ ಬಲೂನ ಬಳೆ
ಜರಿಲಂಗ ತೊಡಿಸಿ ಜಡೆತುಂಬ ಕೇದಿಗೆ
ಅರಸಿನ ಚಂದನ ಆರತಿ ಬೆಳಗಿ ಒಡಲಲಿ
ನೂಲನೇಯ್ದು ಬಟ್ಟೆ ಬಯಲ ದಾರಿ
ನಮಗೂ ನಿಮಗೂ ಅರಳಿಸಿ ತೋರಿಸಿದವರು.

ಅವರು ತಾಯಂದಿರು ಮಾತಿನ
ಮಂತ್ರ ಪುಷ್ಪ ಎದೆಗೆ ಅವಚಿಕೊಂಡ
ಗಾಳಿಗಂಧ ಸೇರಿಸಿ ಬೆರಗಿಗೆ ಉತ್ತರಿಸಿ
ಚರಿತೆ ಹುಟ್ಟಿಸಿ ಬತ್ತದ ಒರತ
ಎಲ್ಲರ ಒಡಲಲಿ ಜೀವಜಲವಾಗಿ ಹರಿದವರು.

ಅವರು ಜಗದ ತಾಯಂದಿರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...